ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಫಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿವೆ.
ವಿರಾಜಪೇಟೆ ಬೆಳ್ಳರಿಮಾಡು ಗ್ರಾಮದ ಪುಟ್ಟಿಚಂದ ಪದ್ಮಿನಿ ಮುದ್ದಪ್ಪರವರ ಕಾಫಿ ತೋಟಕ್ಕೆ ನುಗ್ಗಿದ ನಾಲ್ಕು ಕಾಡಾನೆಗಳು ಬೆಳೆಯನ್ನು ಸಂಪೂರ್ಣ ನಾಶ ಮಾಡಿವೆ. ಕಾಡಾನೆಗಳ ಹಿಂಡು ಕಳೆದ ಕೆಲ ದಿನಗಳಿಂದ ತೀವ್ರ ಹಾನಿ ಮಾಡುತ್ತಿದ್ದು, ಗ್ರಾಮಸ್ಥರು ಭಾರೀ ಆತಂಕದಲ್ಲಿದ್ದಾರೆ.
ಕಳೆದ 15 ದಿನಗಳಿಂದಳೂ ಕಾಡಾನೆಗಳ ಈ ಹಿಂಡು ಗ್ರಾಮದಲ್ಲಿ ಓಡಾಡುತ್ತಿದ್ದು, ಅರಣ್ಯ ಇಲಾಖೆ ಇವುಗಳನ್ನು ಓಡಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರಬರಲು ತೀವ್ರ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಆನೆಗಳ ದಾಳಿ ತಪ್ಪಿಸುವಂತೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದು, ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…