ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಫಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿವೆ.
ವಿರಾಜಪೇಟೆ ಬೆಳ್ಳರಿಮಾಡು ಗ್ರಾಮದ ಪುಟ್ಟಿಚಂದ ಪದ್ಮಿನಿ ಮುದ್ದಪ್ಪರವರ ಕಾಫಿ ತೋಟಕ್ಕೆ ನುಗ್ಗಿದ ನಾಲ್ಕು ಕಾಡಾನೆಗಳು ಬೆಳೆಯನ್ನು ಸಂಪೂರ್ಣ ನಾಶ ಮಾಡಿವೆ. ಕಾಡಾನೆಗಳ ಹಿಂಡು ಕಳೆದ ಕೆಲ ದಿನಗಳಿಂದ ತೀವ್ರ ಹಾನಿ ಮಾಡುತ್ತಿದ್ದು, ಗ್ರಾಮಸ್ಥರು ಭಾರೀ ಆತಂಕದಲ್ಲಿದ್ದಾರೆ.
ಕಳೆದ 15 ದಿನಗಳಿಂದಳೂ ಕಾಡಾನೆಗಳ ಈ ಹಿಂಡು ಗ್ರಾಮದಲ್ಲಿ ಓಡಾಡುತ್ತಿದ್ದು, ಅರಣ್ಯ ಇಲಾಖೆ ಇವುಗಳನ್ನು ಓಡಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರಬರಲು ತೀವ್ರ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಆನೆಗಳ ದಾಳಿ ತಪ್ಪಿಸುವಂತೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದು, ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…