ಕೊಡಗು

ವಿರಾಜಪೇಟೆಯಲ್ಲಿ ಮುಂದುವರಿದ ಕಾಡಾನೆ ದಾಳಿ: ಕೃಷಿ ಫಸಲು ನಷ್ಟ

ವಿರಾಜಪೇಟೆ: ವಿರಾಜಪೇಟೆ ಸಮೀಪದ ಒಂದನೇ ರುದ್ರಗುಪ್ಪೆಯಲ್ಲಿ ಕಾಡಾನೆಯೊಂದು ಕಾಫಿ ತೋಟದೊಳಗೆ ನುಗ್ಗಿ ದಾಂಧಲೆ ನಡೆಸಿದ ಪರಿಣಾಮ ಅಪಾರ ಪ್ರಮಾಣದ ಫಸಲು ನಷ್ಟವಾಗಿದೆ.

ವಿರಾಜಪೇಟೆ ಸಮೀಪದ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ರುದ್ರಗುಪ್ಪೆ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗವೊಂದು ಗ್ರಾಮದ ಎ.ಎಚ್.ಸರಸ್ವತಿ ಮತ್ತು ಟೋಮಿ ಎಂಬುವವರ ತೋಟಗಳಿಗೆ ನುಗ್ಗಿ ಕಾಫಿ, ಅಡಿಕೆ, ತೆಂಗು, ಬಾಳೆ ಗಿಡಗಳಿಗೆ ಹಾನಿಯುಂಟು ಮಾಡಿದೆ.

ಅಲ್ಲದೇ ವಿದ್ಯುತ್‌ ಪರಿವರ್ತಕದಿಂದ ಕೊಳವೆ ಬಾವಿಗೆ ಕಲ್ಪಿಸುವ ವಿದ್ಯುತ್ ತಂತಿ ತುಂಡರಿಸಿದೆ. ಇದರಿಂದ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿದೆ. ಕೂಡಲೇ ಈ ಬಗ್ಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಾಡುಪ್ರಾಣಿಗಳ ಹಾವಳಿಯನ್ನು ತಡೆಯಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಆನೆಗಳು ಕಾಡಿನಿಂದ ನಾಡಿಗೆ ಬರದಂತೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಒಂದು ವೇಳೆ ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳದೇ ಇದ್ದಲ್ಲಿ, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಗಾಂಜಾ ಮಾರಾಟ ತಡೆಗಟ್ಟಿ

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…

8 mins ago

ಓದುಗರ ಪತ್ರ: ಕೇರಳದಲ್ಲಿ ಉಚಿತ ಶಿಕ್ಷಣ ಶ್ಲಾಘನೀಯ

ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…

20 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ…

28 mins ago

ಓದುಗರ ಪತ್ರ: ಬಸ್‌ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ ಸ್ವಾಗತಾರ್ಹ

ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು…

39 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: 24 ರೂ. ಹಿಡಿದು ಮುಂಬೈಗೆ ಬಂದ ಮುನ್ನಾ ಈಗ ಸೆಲೆಬ್ರೆಟಿ ಫೋಟೋಗ್ರಾಫರ್!

ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…

3 hours ago

ಟಿ-20 ವಿಶ್ವಕಪ್: ಕೌಂಟ್‌ಡೌನ್ ಶುರು

ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್‌ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು.…

3 hours ago