ವಿರಾಜಪೇಟೆ: ವಿರಾಜಪೇಟೆ ಸಮೀಪದ ಒಂದನೇ ರುದ್ರಗುಪ್ಪೆಯಲ್ಲಿ ಕಾಡಾನೆಯೊಂದು ಕಾಫಿ ತೋಟದೊಳಗೆ ನುಗ್ಗಿ ದಾಂಧಲೆ ನಡೆಸಿದ ಪರಿಣಾಮ ಅಪಾರ ಪ್ರಮಾಣದ ಫಸಲು ನಷ್ಟವಾಗಿದೆ.
ವಿರಾಜಪೇಟೆ ಸಮೀಪದ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ರುದ್ರಗುಪ್ಪೆ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗವೊಂದು ಗ್ರಾಮದ ಎ.ಎಚ್.ಸರಸ್ವತಿ ಮತ್ತು ಟೋಮಿ ಎಂಬುವವರ ತೋಟಗಳಿಗೆ ನುಗ್ಗಿ ಕಾಫಿ, ಅಡಿಕೆ, ತೆಂಗು, ಬಾಳೆ ಗಿಡಗಳಿಗೆ ಹಾನಿಯುಂಟು ಮಾಡಿದೆ.
ಅಲ್ಲದೇ ವಿದ್ಯುತ್ ಪರಿವರ್ತಕದಿಂದ ಕೊಳವೆ ಬಾವಿಗೆ ಕಲ್ಪಿಸುವ ವಿದ್ಯುತ್ ತಂತಿ ತುಂಡರಿಸಿದೆ. ಇದರಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಕೂಡಲೇ ಈ ಬಗ್ಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಾಡುಪ್ರಾಣಿಗಳ ಹಾವಳಿಯನ್ನು ತಡೆಯಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಆನೆಗಳು ಕಾಡಿನಿಂದ ನಾಡಿಗೆ ಬರದಂತೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಒಂದು ವೇಳೆ ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳದೇ ಇದ್ದಲ್ಲಿ, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…