ಕೊಡಗು

ವಿರಾಜಪೇಟೆಯಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲದಲ್ಲಿ ವ್ಯಕ್ತಿಯೋರ್ವರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ.

ಉತ್ತಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾರೆ.

ರೈತ ಉತ್ತಪ್ಪ ಕಾಫಿ ತೋಟದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ಅಠಾತ್‌ ದಾಳಿ ನಡೆಸಿದೆ. ಪರಿಣಾಮ ಉತ್ತಪ್ಪರಿಗೆ ಗಂಭೀರ ಗಾಯಗಳಾಗಿದ್ದು, ವಿರಾಜಪೇಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನೂ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ವಿಪರೀತ ಹೆಚ್ಚಾಗಿದ್ದು, ಇವುಗಳನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನು ಮುಂದೆ ಈ ರೀತಿಯ ಘಟನೆಗಳು ಆಗದಂತೆ ಅರಣ್ಯ ಇಲಾಖೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ವಿರುದ್ಧ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಾಮರ್ಥ್ಯ ವೃದ್ಧಿಗೆ ಎಐ ಬಳಸಿಕೊಳ್ಳಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…

8 mins ago

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

2 hours ago

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

2 hours ago

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

2 hours ago

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…

3 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಸಿಗುತ್ತಾ ಅನುಮತಿ?: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು…

3 hours ago