ಕೊಡಗು

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ – ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ ಕಾಫಿ ಬೆಳೆಗಾರ ಚೌರಿರ ಗಣಪತಿ (ಗಪ್ಪಿ) ಎಂಬುವವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಿಢೀರ್ ದಾಳಿ ಮಾಡಿರುವ ಕಾಡಾನೆ ಅವರ ಜೀವವನ್ನು ಅಹುತಿ ಪಡೆದಿದೆ.

ಆ ಮೂಲಕ ಕೊಡಗಿನಲ್ಲಿ ಕೇವಲ 13 ದಿನಗಳ ಅವಧಿಯಲ್ಲಿ ಆನೆ ದಾಳಿಗೆ ಅಮಾಯಕ ಮೂರನೇ ಜೀವ ಬಲಿ ಆಗಿದೆ. ಈ ಘಟನೆ ಮಾನವ-ಪ್ರಾಣಿ ಸಂಘರ್ಷದ ತೀವ್ರತೆಯನ್ನು ಎತ್ತಿ ತೋರಿಸುತ್ತಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಾಗುತ್ತಿದೆ.

ಕೆಲ ದಿನಗಳ ಹಿಂದಷ್ಟೇ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಪೂಜ್ಯ ಎಂಬಾಕೆ ದಾರುಣವಾಗಿ ಬಲಿಯಾಗಿದ್ದಳು. ಆ ಘಟನೆ ನಡೆದ 10ನೇ ದಿನಕ್ಕೆ ವಾಲ್ನೂರಿನಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕಾಡಾನೆಗೆ ಜೀವ ತೆತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿದ್ದು, ರಾಜ್ಯದ ಹಲವೆಡೆ ಪ್ರಾಣಿ ದಾಳಿಯಿಂದ ನೂರಾರು ಮಂದಿ ಸಾಯುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕೊಡಗು, ಮೈಸೂರು, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, 33 ಸಾವುಗಳೊಂದಿಗೆ ಕೊಡಗು ಜಿಲ್ಲೆ ಈ ಪಟ್ಟಿಯಲ್ಲಿ ಎರಡನೇಯ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಮೇಲಿಂದ ಮೇಲೆ ಕಾಡು ಪ್ರಾಣಿಗಳ ದಾಳಿಗೆ ಜನರು ಬಲಿಯಾಗುತ್ತಿದ್ದರೂ ಅರಣ್ಯ ಇಲಾಖೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವೂ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

36 mins ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

2 hours ago

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

3 hours ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

3 hours ago

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ದುರಂತ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…

5 hours ago

ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಎಕರೆಗಟ್ಟಲೇ ಬಾಳೆ ಬೆಳೆ ನಾಶ

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…

5 hours ago