ಕೊಡಗು

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ – ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ ಕಾಫಿ ಬೆಳೆಗಾರ ಚೌರಿರ ಗಣಪತಿ (ಗಪ್ಪಿ) ಎಂಬುವವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಿಢೀರ್ ದಾಳಿ ಮಾಡಿರುವ ಕಾಡಾನೆ ಅವರ ಜೀವವನ್ನು ಅಹುತಿ ಪಡೆದಿದೆ.

ಆ ಮೂಲಕ ಕೊಡಗಿನಲ್ಲಿ ಕೇವಲ 13 ದಿನಗಳ ಅವಧಿಯಲ್ಲಿ ಆನೆ ದಾಳಿಗೆ ಅಮಾಯಕ ಮೂರನೇ ಜೀವ ಬಲಿ ಆಗಿದೆ. ಈ ಘಟನೆ ಮಾನವ-ಪ್ರಾಣಿ ಸಂಘರ್ಷದ ತೀವ್ರತೆಯನ್ನು ಎತ್ತಿ ತೋರಿಸುತ್ತಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಾಗುತ್ತಿದೆ.

ಕೆಲ ದಿನಗಳ ಹಿಂದಷ್ಟೇ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಪೂಜ್ಯ ಎಂಬಾಕೆ ದಾರುಣವಾಗಿ ಬಲಿಯಾಗಿದ್ದಳು. ಆ ಘಟನೆ ನಡೆದ 10ನೇ ದಿನಕ್ಕೆ ವಾಲ್ನೂರಿನಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕಾಡಾನೆಗೆ ಜೀವ ತೆತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿದ್ದು, ರಾಜ್ಯದ ಹಲವೆಡೆ ಪ್ರಾಣಿ ದಾಳಿಯಿಂದ ನೂರಾರು ಮಂದಿ ಸಾಯುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕೊಡಗು, ಮೈಸೂರು, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, 33 ಸಾವುಗಳೊಂದಿಗೆ ಕೊಡಗು ಜಿಲ್ಲೆ ಈ ಪಟ್ಟಿಯಲ್ಲಿ ಎರಡನೇಯ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಮೇಲಿಂದ ಮೇಲೆ ಕಾಡು ಪ್ರಾಣಿಗಳ ದಾಳಿಗೆ ಜನರು ಬಲಿಯಾಗುತ್ತಿದ್ದರೂ ಅರಣ್ಯ ಇಲಾಖೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವೂ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

1 hour ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

4 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago