ಕೊಡಗು: ಕೊಡಗಿನಲ್ಲಿ ಕಾಡಾನೆ – ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ ಕಾಫಿ ಬೆಳೆಗಾರ ಚೌರಿರ ಗಣಪತಿ (ಗಪ್ಪಿ) ಎಂಬುವವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಿಢೀರ್ ದಾಳಿ ಮಾಡಿರುವ ಕಾಡಾನೆ ಅವರ ಜೀವವನ್ನು ಅಹುತಿ ಪಡೆದಿದೆ.
ಆ ಮೂಲಕ ಕೊಡಗಿನಲ್ಲಿ ಕೇವಲ 13 ದಿನಗಳ ಅವಧಿಯಲ್ಲಿ ಆನೆ ದಾಳಿಗೆ ಅಮಾಯಕ ಮೂರನೇ ಜೀವ ಬಲಿ ಆಗಿದೆ. ಈ ಘಟನೆ ಮಾನವ-ಪ್ರಾಣಿ ಸಂಘರ್ಷದ ತೀವ್ರತೆಯನ್ನು ಎತ್ತಿ ತೋರಿಸುತ್ತಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಾಗುತ್ತಿದೆ.
ಕೆಲ ದಿನಗಳ ಹಿಂದಷ್ಟೇ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಪೂಜ್ಯ ಎಂಬಾಕೆ ದಾರುಣವಾಗಿ ಬಲಿಯಾಗಿದ್ದಳು. ಆ ಘಟನೆ ನಡೆದ 10ನೇ ದಿನಕ್ಕೆ ವಾಲ್ನೂರಿನಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕಾಡಾನೆಗೆ ಜೀವ ತೆತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿದ್ದು, ರಾಜ್ಯದ ಹಲವೆಡೆ ಪ್ರಾಣಿ ದಾಳಿಯಿಂದ ನೂರಾರು ಮಂದಿ ಸಾಯುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕೊಡಗು, ಮೈಸೂರು, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, 33 ಸಾವುಗಳೊಂದಿಗೆ ಕೊಡಗು ಜಿಲ್ಲೆ ಈ ಪಟ್ಟಿಯಲ್ಲಿ ಎರಡನೇಯ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಮೇಲಿಂದ ಮೇಲೆ ಕಾಡು ಪ್ರಾಣಿಗಳ ದಾಳಿಗೆ ಜನರು ಬಲಿಯಾಗುತ್ತಿದ್ದರೂ ಅರಣ್ಯ ಇಲಾಖೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವೂ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…