ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮದೆನಾಡು ಗ್ರಾಮದ ನಿವಾಸಿ ದಿವಂಗತ ಪಟ್ಟಡ ಅಯ್ಯಪ್ಪ ಎಂಬುವವರ ಮಗ ಭರತ್ ಕುಮಾರ್ ಎಂಬುವವರೇ ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ದುರ್ದೈವಿಯಾಗಿದ್ದಾರೆ.
ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿರುವ ಭರತ್ ಕುಮಾರ್ ಎಂದಿನಂತೆ ತಮ್ಮ ಬೈಕಿನಲ್ಲಿ ಮದನಾಡು-ಬೆಟ್ಟತ್ತೂರು ರಸ್ತೆಯಲ್ಲಿ ಸಂಚರಿಸುತ್ತಿರುವ ಸಂದರ್ಭ ಸಾಲಪು ಎಂಬಲ್ಲಿ ರಸ್ತೆಯ ಮಧ್ಯೆ ದಿಢೀರನೇ ಪ್ರತ್ಯಕ್ಷವಾದ ಕಾಡಾನೆಗಳ ಹಿಂಡು ದಾಳಿ ಮಾಡಿ ಸೊಂಡಿಲಿನಲ್ಲಿ ಎಸೆದ ಪರಿಣಾಮ ಕಾಲು ಮುರಿತಗೊಂಡು ತಲೆಗೂ ಗಂಭೀರ ಗಾಯಗಳಾಗಿದೆ.
ಗಾಯಗೊಂಡಿರುವ ಭರತ್ ಕುಮಾರ್ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.





