ವಿರಾಜಪೇಟೆ: ಕೊಡಗು ಜಿಲ್ಲೆಯ ತೋಟಗಳಲ್ಲಿ ಗುಂಪುಗುಂಪಾಗಿ ಬೀಡುಬಿಟ್ಟಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಕಾಡಿಗಟ್ಟುವ ಕಾರ್ಯವಾಗಬೇಕು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಆಗ್ರಹಿಸಿದ್ದಾರೆ.
ಕಾಡಾನೆ ಮಾನವ ಸಂಘರ್ಷ, ವನ್ಯಜೀವಿಗಳ ಉಪಟಳ ಹಾಗೂ ರೈತರ ಸಮಸ್ಯೆ ಕುರಿತು ವಿರಾಜಪೇಟೆಯ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರ ಜೊತೆ ಸಭೆ ಆಯೋಜಿಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ಸ್ಥಳೀಯರು, ಕಾಡಾನೆಗಳನ್ನು ನಿಯಂತ್ರಿಸಲು ಅರಣ್ಯದಂಚಿನಲ್ಲಿ ನಿರ್ಮಾಣ ಮಾಡಿರುವ ಕಂದಕವನ್ನು ಆಳ ಮತ್ತು ಅಗಲವನ್ನು ವಿಸ್ತರಿಸಬೇಕು. ಕೆಲವು ಭಾಗಗಳಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿಲ್ಲ. ಅರಣ್ಯದಂಚಿನಲ್ಲಿ ಕಾಡಾನೆಗಳನ್ನು ನಿಯಂತ್ರಣಗೊಳಿಸುವ ಸಲುವಾಗಿ ಅಳವಡಿಸಿರುವ ಸೋಲಾರ್ ಬೇಲಿಗಳನ್ನು ಶೀಘ್ರವಾಗಿ ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿದರು.
ಅರಣ್ಯ ಗಡಿ ಭಾಗಗಳಲ್ಲಿನ ಜನ ವಾಸಿಸುವ ಪ್ರದೇಶಗಳಲ್ಲಿ ವೀಕ್ಷಕ ಗೋಪುರ ನಿರ್ಮಿಸಿ ಕೃತಕ ಬುದ್ದಿಮತ್ತೆ ಕ್ಯಾಮರಾಗಳನ್ನು ಅಳವಡಿಸಬೇಕು. ವನ್ಯಜೀವಿ ಉಪಟಳಗಳಿಂದಾಗುವ ಹಾನಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು ಶೇ.20ರಷ್ಟು ಹೆಚ್ಚಿಸಬೇಕು. ಅರಣ್ಯ ಇಲಾಖೆಯು ಮತ್ತಿಗೋಡು ಅರಣ್ಯ ಪ್ರದೇಶದಲ್ಲಿ ನಡೆಸಿಕೊಂಡು ಬರುತ್ತಿರುವ ಪ್ರವಾಸೋದ್ಯಮ ಚಟುವಟಿಕೆಯನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿದರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…