ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ ನಡೆದಿದೆ.
ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಹಾಗೂ ಮಠ ಭಾಗದಿಂದ ಬಿಜಿಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ, ಕಾಫಿ ತೋಟದಿಂದ ಏಕಾಏಕಿ ರಸ್ತೆಗಿಳಿದ ಸಲಗ ಬಸ್ಸನ್ನು ಹಿಂಬಾಲಿಸಿದೆ. ಘಟನೆಯ ದೃಶ್ಯವನ್ನು ಬಸ್ ಚಾಲಕ ಸುನಿಲ್ ಅವರ ಪುತ್ರಿ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
ಘಟನೆ ನಡೆದ ಸ್ಥಳದ ಸಮೀಪದಲ್ಲಿ ಸುಮಾರು 10 ವಿದ್ಯಾರ್ಥಿಗಳು ಬಸ್ಗಾಗಿ ಕಾದು ಕುಳಿತಿದ್ದು, ಅಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು ಆತಂಕಗೊಂಡ ಪೋಷಕರು ಹಾಗೂ ಸ್ಥಳೀಯರು ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಅಲಿ ಅವರಿಗೆ ಮಾಹಿತಿ ನೀಡಿದ್ದಾರೆ.
ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆ ಹಾವಳಿಯನ್ನು ತಡೆಯಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…