ಕೊಡಗು

ಮಡಿಕೇರಿ: ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು!

ಮಡಿಕೇರಿ: ನಿರ್ಮಾಣ ಹಂತದ ಬಾವಿಯೊಳಗೆ ಕಾಡಾನೆಯೊಂದು ಬಿದ್ದು ಸಾವನ್ನಪ್ಪಿರುವ ಘಟನೆ ಮಡಿಕೇರಿ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.

ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ತೆರೆದ ಬಾವಿಯನ್ನು ನಿರ್ಮಾಣ ಮಾಡುವ ಹಂತದಲ್ಲಿ ಇದ್ದ ಬಾವಿಗೆ ಸೋಮವಾರ (ಜೂನ್‌.17) ತಡರಾತ್ರಿ 11.30 ವೇಳೆಯಲ್ಲಿ ಕಾಡಾನೆಯೊಂದು ಬಿದ್ದು ಮೃತಪಟ್ಟಿದೆ.

ಪಾಲೇಂಗಡ ಬಿದ್ದಪ್ಪ ಶಂಭು ಎಂಬುವವರ ಮನೆ ಮುಂದೆ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

3 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

3 hours ago

ಉಪನಗರ ಯೋಜನೆ ಖಂಡಿತ ಅಭಿವೃದ್ಧಿಯಲ್ಲ

ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಗೆದಷ್ಟು ಬಹಿರಂಗ; ರಾಮಮಂದಿರ ಕಾಣಿಕೆ ಲೂಟಿ

ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…

3 hours ago

ಎಸ್‌ಐಆರ್: ಮಿಶ್ರ ಪ್ರತಿಕ್ರಿಯೆ

ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…

3 hours ago