Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಇಂಗು ಗುಂಡಿಯಲ್ಲಿ ಬಿದ್ದಿದ್ದ ಕಾಡಾನೆ ರಕ್ಷಣೆ

ಮಡಿಕೇರಿ: ಇಂಗು ಗುಂಡಿಗೆ ಬಿದ್ದ ಕಾಡಾನೆಯನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ವಿರಾಜಪೇಟೆ ತಾಲ್ಲೂಕಿನ ಕೆ.ಬೈಗೋಡು ಗ್ರಾಮದ ಗಣೇಶ್‌ ಎಂಬುವವರ ಮನೆ ಬಳಿ ಕಾಡಾನೆಯೊಂದು ಇಂಗು ಗುಂಡಿಗೆ ಬಿದ್ದು ನರಳಾಡುತ್ತಿತ್ತು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆಗೆದು ಆನೆ ಹೊರಬರಲು ಸಹಾಯ ಮಾಡಿದರು.

ಗುಂಡಿಯಿಂದ ಹೊರ ಬಂದ ಬಳಿಕ ಕೆಲ ಸಮಯ ವಿಶ್ರಾಂತಿ ಪಡೆದುಕೊಂಡ ಆನೆ ಬಳಿಕ ನಿಧಾನವಾಗಿ ಅಯ್ಯಪ್ಪ ದೇವರ ಕಾಡಿನ ಕಡೆಗೆ ಹೋಯಿತು.

ಇನ್ನೂ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ತುಂಬಾ ಜಾಸ್ತಿಯಾಗಿದ್ದು, ರಾತ್ರಿಯ ವೇಳೆ ಮನೆಯಿಂದ ಹೊರಬರಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆದಷ್ಟು ಬೇಗ ಆನೆಗಳ ಹಾವಳಿ ತಡೆಗಟ್ಟಬೇಕು ಎಂದು ಆಗ್ರಹಿಸಿದ್ದಾರೆ.

Tags:
error: Content is protected !!