ಕೊಡಗು

ಹಾಡುಹಗಲೇ ಕಾಡನೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ನಾಪೋಕ್ಲು: ಸಮೀಪದ ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.

ನೆಲಜಿ ಗ್ರಾಮದಿಂದ ಕಕ್ಕಬ್ಬೆ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಕಾಡಾನೆಗಳ ಹಿಂಡು ರಸ್ತೆ ದಾಟುವ ದೃಶ್ಯ ಕಂಡು ಬಂದಿದ್ದು, ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರವನ್ನು ಸೆರೆಹಿಡಿದಿದ್ದಾರೆ. ಹಾಡುಹಗಲೇ ಕಾಡಾನೆಗಳನ್ನು ಕಂಡ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ನೆಲಜಿ ಗ್ರಾಮದ ಚೀಯಕ ಪೂವಂಡ ಉಮೇಶ್, ಅಚ್ಛಾಂಡಿರ ಕುಟುಂಬ ಮತ್ತು ಮಣವಟ್ಟೀರ ಕುಟುಂಬಗಳ ತೋಟಗಳಿಗೆ ಕಾಡಾನೆಗಳು ಲಗ್ಗೆ ಇಟ್ಟಿದ್ದು, ಕಾಫಿ ಮತ್ತು ಇತರ ಗಿಡಗಳಿಗೆ ಹಾನಿಯಾಗಿದೆ. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಭಾಗಮಂಡಲ ಕಕ್ಕಬ್ಬೆ ಉಪವಲಯ ಅರಣ್ಯ ಅಧಿಕಾರಿ ಕಾಳೇಗೌಡ, ಅರಣ್ಯಪಾಲಕ ಶರತ್, ಅರಣ್ಯ ವೀಕ್ಷಕ ಸಚಿನ್ ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

37 seconds ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

2 mins ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

4 mins ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

6 mins ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

8 mins ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

10 mins ago