ಕೊಡಗು

ಹಾಡುಹಗಲೇ ಕಾಡನೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ನಾಪೋಕ್ಲು: ಸಮೀಪದ ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.

ನೆಲಜಿ ಗ್ರಾಮದಿಂದ ಕಕ್ಕಬ್ಬೆ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಕಾಡಾನೆಗಳ ಹಿಂಡು ರಸ್ತೆ ದಾಟುವ ದೃಶ್ಯ ಕಂಡು ಬಂದಿದ್ದು, ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರವನ್ನು ಸೆರೆಹಿಡಿದಿದ್ದಾರೆ. ಹಾಡುಹಗಲೇ ಕಾಡಾನೆಗಳನ್ನು ಕಂಡ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ನೆಲಜಿ ಗ್ರಾಮದ ಚೀಯಕ ಪೂವಂಡ ಉಮೇಶ್, ಅಚ್ಛಾಂಡಿರ ಕುಟುಂಬ ಮತ್ತು ಮಣವಟ್ಟೀರ ಕುಟುಂಬಗಳ ತೋಟಗಳಿಗೆ ಕಾಡಾನೆಗಳು ಲಗ್ಗೆ ಇಟ್ಟಿದ್ದು, ಕಾಫಿ ಮತ್ತು ಇತರ ಗಿಡಗಳಿಗೆ ಹಾನಿಯಾಗಿದೆ. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಭಾಗಮಂಡಲ ಕಕ್ಕಬ್ಬೆ ಉಪವಲಯ ಅರಣ್ಯ ಅಧಿಕಾರಿ ಕಾಳೇಗೌಡ, ಅರಣ್ಯಪಾಲಕ ಶರತ್, ಅರಣ್ಯ ವೀಕ್ಷಕ ಸಚಿನ್ ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಸ್ತುತ ದಲಿತ ರಾಜಕಾರಣದಲ್ಲಿ ಮಹದೇವಪ್ಪ ಎಂಬ ವಿದ್ಯಮಾನ

ರಮೇಶ್‌ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…

27 mins ago

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

48 mins ago

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…

1 hour ago

ದಲಿತ ಚಿಂತಕ ಧೀಮಂತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರ ಹೋರಾಟದ ಕತೆ……

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು…

2 hours ago

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

5 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

5 hours ago