ಮಡಿಕೇರಿ: ಬೆಳಕಿನ ದಸರೆ ಎಂದೇ ಹೆಸರಾದ ಮಡಿಕೇರಿಯ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಸಾಗಿದ ಮಂಟಪಗಳನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡು ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಎಳೆದರು.
ಮೈಸೂರು ದಸರಾ ಮುಗಿಯುತ್ತಿದ್ದಂತೆ ಇಲ್ಲಿ ಆರಂಭವಾದ 10 ಮಂಟಪಗಳ ಶೋಭಾಯಾತ್ರೆಗೆ ಇಲ್ಲಿನ ಪೇಟೆ ಶ್ರೀರಾಮಮಂದಿರದ ಮಂಟಪವು ಮುನ್ನುಡಿ ಬರೆದಿದೆ.
150ಕ್ಕೂ ಅಧಿಕ ವರ್ಷಗಳಷ್ಟು ಸುದೀರ್ಘ ಕಾಲದಿಂದ ವಿಜಯದಶಮಿಯಂದು ಮೆರವಣಿಗೆಯಲ್ಲಿ ಭಾಗಿಯಾಗುತ್ತಿರುವ ಈ ದೇಗುಲದ ಮಂಟಪ ವಿಷ್ಣುವಿನ ಮತ್ಸ್ಯಾವತಾರ ಕಥಾವಸ್ತುವನ್ನು ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ ಮುಂಚೂಣಿಯಲ್ಲಿತ್ತು.
ವರ್ಣಮಯ ಮಂಟಪಗಳನ್ನು ನೋಡುತ್ತಾ ಹಲವರು ಮೈಮರೆತು ನರ್ತಿಸಿದರು. ಮಂಟಪಗಳಲ್ಲಿ ಪ್ರದರ್ಶನಗೊಂಡ ಪೌರಾಣಿಕ ಕಥೆಗಳನ್ನು ಕೂತೂಹಲದಿಂದ ವೀಕ್ಷಣೆ ಮಾಡಿದರು.
ಈ ಮೂಲಕ ಮಂಜಿನ ನಗರಿ ಮಡಿಕೇರಿ ದಸರಾಗೆ ಅದ್ಧೂರಿ ತೆರೆ ಬಿದ್ದಿತು. ಇಲ್ಲೂ ಕೂಡ ಸಹಸ್ರಾರು ಮಂದಿ ಸಾರ್ವಜನಿಕರು ದಸರಾ ಕಣ್ತುಂಬಿಕೊಂಡು ಖುಷಿಪಟ್ಟರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…