ಮಡಿಕೇರಿ: ಬೆಳಕಿನ ದಸರೆ ಎಂದೇ ಹೆಸರಾದ ಮಡಿಕೇರಿಯ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಸಾಗಿದ ಮಂಟಪಗಳನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡು ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಎಳೆದರು.
ಮೈಸೂರು ದಸರಾ ಮುಗಿಯುತ್ತಿದ್ದಂತೆ ಇಲ್ಲಿ ಆರಂಭವಾದ 10 ಮಂಟಪಗಳ ಶೋಭಾಯಾತ್ರೆಗೆ ಇಲ್ಲಿನ ಪೇಟೆ ಶ್ರೀರಾಮಮಂದಿರದ ಮಂಟಪವು ಮುನ್ನುಡಿ ಬರೆದಿದೆ.
150ಕ್ಕೂ ಅಧಿಕ ವರ್ಷಗಳಷ್ಟು ಸುದೀರ್ಘ ಕಾಲದಿಂದ ವಿಜಯದಶಮಿಯಂದು ಮೆರವಣಿಗೆಯಲ್ಲಿ ಭಾಗಿಯಾಗುತ್ತಿರುವ ಈ ದೇಗುಲದ ಮಂಟಪ ವಿಷ್ಣುವಿನ ಮತ್ಸ್ಯಾವತಾರ ಕಥಾವಸ್ತುವನ್ನು ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ ಮುಂಚೂಣಿಯಲ್ಲಿತ್ತು.
ವರ್ಣಮಯ ಮಂಟಪಗಳನ್ನು ನೋಡುತ್ತಾ ಹಲವರು ಮೈಮರೆತು ನರ್ತಿಸಿದರು. ಮಂಟಪಗಳಲ್ಲಿ ಪ್ರದರ್ಶನಗೊಂಡ ಪೌರಾಣಿಕ ಕಥೆಗಳನ್ನು ಕೂತೂಹಲದಿಂದ ವೀಕ್ಷಣೆ ಮಾಡಿದರು.
ಈ ಮೂಲಕ ಮಂಜಿನ ನಗರಿ ಮಡಿಕೇರಿ ದಸರಾಗೆ ಅದ್ಧೂರಿ ತೆರೆ ಬಿದ್ದಿತು. ಇಲ್ಲೂ ಕೂಡ ಸಹಸ್ರಾರು ಮಂದಿ ಸಾರ್ವಜನಿಕರು ದಸರಾ ಕಣ್ತುಂಬಿಕೊಂಡು ಖುಷಿಪಟ್ಟರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…