ಮಡಿಕೇರಿ: ಬೆಳಕಿನ ದಸರೆ ಎಂದೇ ಹೆಸರಾದ ಮಡಿಕೇರಿಯ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಸಾಗಿದ ಮಂಟಪಗಳನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡು ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಎಳೆದರು.
ಮೈಸೂರು ದಸರಾ ಮುಗಿಯುತ್ತಿದ್ದಂತೆ ಇಲ್ಲಿ ಆರಂಭವಾದ 10 ಮಂಟಪಗಳ ಶೋಭಾಯಾತ್ರೆಗೆ ಇಲ್ಲಿನ ಪೇಟೆ ಶ್ರೀರಾಮಮಂದಿರದ ಮಂಟಪವು ಮುನ್ನುಡಿ ಬರೆದಿದೆ.
150ಕ್ಕೂ ಅಧಿಕ ವರ್ಷಗಳಷ್ಟು ಸುದೀರ್ಘ ಕಾಲದಿಂದ ವಿಜಯದಶಮಿಯಂದು ಮೆರವಣಿಗೆಯಲ್ಲಿ ಭಾಗಿಯಾಗುತ್ತಿರುವ ಈ ದೇಗುಲದ ಮಂಟಪ ವಿಷ್ಣುವಿನ ಮತ್ಸ್ಯಾವತಾರ ಕಥಾವಸ್ತುವನ್ನು ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ ಮುಂಚೂಣಿಯಲ್ಲಿತ್ತು.
ವರ್ಣಮಯ ಮಂಟಪಗಳನ್ನು ನೋಡುತ್ತಾ ಹಲವರು ಮೈಮರೆತು ನರ್ತಿಸಿದರು. ಮಂಟಪಗಳಲ್ಲಿ ಪ್ರದರ್ಶನಗೊಂಡ ಪೌರಾಣಿಕ ಕಥೆಗಳನ್ನು ಕೂತೂಹಲದಿಂದ ವೀಕ್ಷಣೆ ಮಾಡಿದರು.
ಈ ಮೂಲಕ ಮಂಜಿನ ನಗರಿ ಮಡಿಕೇರಿ ದಸರಾಗೆ ಅದ್ಧೂರಿ ತೆರೆ ಬಿದ್ದಿತು. ಇಲ್ಲೂ ಕೂಡ ಸಹಸ್ರಾರು ಮಂದಿ ಸಾರ್ವಜನಿಕರು ದಸರಾ ಕಣ್ತುಂಬಿಕೊಂಡು ಖುಷಿಪಟ್ಟರು.
ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25…
ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ…
ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್ ಟೆಂಪಲ್ ಸಮೀಪದ ದೊಡ್ಡ ಹರವೆ ಕಾಲೋನಿ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…
ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ…