ಕೊಡಗು

ಮಡಿಕೇರಿ ದಸರಾಗೆ ಅದ್ಧೂರಿ ತೆರೆ

ಮಡಿಕೇರಿ: ಬೆಳಕಿನ ದಸರೆ ಎಂದೇ ಹೆಸರಾದ ಮಡಿಕೇರಿಯ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಸಾಗಿದ ಮಂಟಪಗಳನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡು ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಎಳೆದರು.

ಮೈಸೂರು ದಸರಾ ಮುಗಿಯುತ್ತಿದ್ದಂತೆ ಇಲ್ಲಿ ಆರಂಭವಾದ 10 ಮಂಟಪಗಳ ಶೋಭಾಯಾತ್ರೆಗೆ ಇಲ್ಲಿನ ಪೇಟೆ ಶ್ರೀರಾಮಮಂದಿರದ ಮಂಟಪವು ಮುನ್ನುಡಿ ಬರೆದಿದೆ.

150ಕ್ಕೂ ಅಧಿಕ ವರ್ಷಗಳಷ್ಟು ಸುದೀರ್ಘ ಕಾಲದಿಂದ ವಿಜಯದಶಮಿಯಂದು ಮೆರವಣಿಗೆಯಲ್ಲಿ ಭಾಗಿಯಾಗುತ್ತಿರುವ ಈ ದೇಗುಲದ ಮಂಟಪ ವಿಷ್ಣುವಿನ ಮತ್ಸ್ಯಾವತಾರ ಕಥಾವಸ್ತುವನ್ನು ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ ಮುಂಚೂಣಿಯಲ್ಲಿತ್ತು.

ವರ್ಣಮಯ ಮಂಟಪಗಳನ್ನು ನೋಡುತ್ತಾ ಹಲವರು ಮೈಮರೆತು ನರ್ತಿಸಿದರು. ಮಂಟಪಗಳಲ್ಲಿ ಪ್ರದರ್ಶನಗೊಂಡ ಪೌರಾಣಿಕ ಕಥೆಗಳನ್ನು ಕೂತೂಹಲದಿಂದ ವೀಕ್ಷಣೆ ಮಾಡಿದರು.

ಈ ಮೂಲಕ ಮಂಜಿನ ನಗರಿ ಮಡಿಕೇರಿ ದಸರಾಗೆ ಅದ್ಧೂರಿ ತೆರೆ ಬಿದ್ದಿತು. ಇಲ್ಲೂ ಕೂಡ ಸಹಸ್ರಾರು ಮಂದಿ ಸಾರ್ವಜನಿಕರು ದಸರಾ ಕಣ್ತುಂಬಿಕೊಂಡು ಖುಷಿಪಟ್ಟರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

48 mins ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

50 mins ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

52 mins ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

54 mins ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

56 mins ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

1 hour ago