ಮಡಿಕೇರಿ: ಬೆಳಕಿನ ದಸರೆ ಎಂದೇ ಹೆಸರಾದ ಮಡಿಕೇರಿಯ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಸಾಗಿದ ಮಂಟಪಗಳನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡು ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಎಳೆದರು.
ಮೈಸೂರು ದಸರಾ ಮುಗಿಯುತ್ತಿದ್ದಂತೆ ಇಲ್ಲಿ ಆರಂಭವಾದ 10 ಮಂಟಪಗಳ ಶೋಭಾಯಾತ್ರೆಗೆ ಇಲ್ಲಿನ ಪೇಟೆ ಶ್ರೀರಾಮಮಂದಿರದ ಮಂಟಪವು ಮುನ್ನುಡಿ ಬರೆದಿದೆ.
150ಕ್ಕೂ ಅಧಿಕ ವರ್ಷಗಳಷ್ಟು ಸುದೀರ್ಘ ಕಾಲದಿಂದ ವಿಜಯದಶಮಿಯಂದು ಮೆರವಣಿಗೆಯಲ್ಲಿ ಭಾಗಿಯಾಗುತ್ತಿರುವ ಈ ದೇಗುಲದ ಮಂಟಪ ವಿಷ್ಣುವಿನ ಮತ್ಸ್ಯಾವತಾರ ಕಥಾವಸ್ತುವನ್ನು ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ ಮುಂಚೂಣಿಯಲ್ಲಿತ್ತು.
ವರ್ಣಮಯ ಮಂಟಪಗಳನ್ನು ನೋಡುತ್ತಾ ಹಲವರು ಮೈಮರೆತು ನರ್ತಿಸಿದರು. ಮಂಟಪಗಳಲ್ಲಿ ಪ್ರದರ್ಶನಗೊಂಡ ಪೌರಾಣಿಕ ಕಥೆಗಳನ್ನು ಕೂತೂಹಲದಿಂದ ವೀಕ್ಷಣೆ ಮಾಡಿದರು.
ಈ ಮೂಲಕ ಮಂಜಿನ ನಗರಿ ಮಡಿಕೇರಿ ದಸರಾಗೆ ಅದ್ಧೂರಿ ತೆರೆ ಬಿದ್ದಿತು. ಇಲ್ಲೂ ಕೂಡ ಸಹಸ್ರಾರು ಮಂದಿ ಸಾರ್ವಜನಿಕರು ದಸರಾ ಕಣ್ತುಂಬಿಕೊಂಡು ಖುಷಿಪಟ್ಟರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…