ಮಡಿಕೇರಿ: ಬೆಳಕಿನ ದಸರೆ ಎಂದೇ ಹೆಸರಾದ ಮಡಿಕೇರಿಯ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಸಾಗಿದ ಮಂಟಪಗಳನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡು ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಎಳೆದರು.
ಮೈಸೂರು ದಸರಾ ಮುಗಿಯುತ್ತಿದ್ದಂತೆ ಇಲ್ಲಿ ಆರಂಭವಾದ 10 ಮಂಟಪಗಳ ಶೋಭಾಯಾತ್ರೆಗೆ ಇಲ್ಲಿನ ಪೇಟೆ ಶ್ರೀರಾಮಮಂದಿರದ ಮಂಟಪವು ಮುನ್ನುಡಿ ಬರೆದಿದೆ.
150ಕ್ಕೂ ಅಧಿಕ ವರ್ಷಗಳಷ್ಟು ಸುದೀರ್ಘ ಕಾಲದಿಂದ ವಿಜಯದಶಮಿಯಂದು ಮೆರವಣಿಗೆಯಲ್ಲಿ ಭಾಗಿಯಾಗುತ್ತಿರುವ ಈ ದೇಗುಲದ ಮಂಟಪ ವಿಷ್ಣುವಿನ ಮತ್ಸ್ಯಾವತಾರ ಕಥಾವಸ್ತುವನ್ನು ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ ಮುಂಚೂಣಿಯಲ್ಲಿತ್ತು.
ವರ್ಣಮಯ ಮಂಟಪಗಳನ್ನು ನೋಡುತ್ತಾ ಹಲವರು ಮೈಮರೆತು ನರ್ತಿಸಿದರು. ಮಂಟಪಗಳಲ್ಲಿ ಪ್ರದರ್ಶನಗೊಂಡ ಪೌರಾಣಿಕ ಕಥೆಗಳನ್ನು ಕೂತೂಹಲದಿಂದ ವೀಕ್ಷಣೆ ಮಾಡಿದರು.
ಈ ಮೂಲಕ ಮಂಜಿನ ನಗರಿ ಮಡಿಕೇರಿ ದಸರಾಗೆ ಅದ್ಧೂರಿ ತೆರೆ ಬಿದ್ದಿತು. ಇಲ್ಲೂ ಕೂಡ ಸಹಸ್ರಾರು ಮಂದಿ ಸಾರ್ವಜನಿಕರು ದಸರಾ ಕಣ್ತುಂಬಿಕೊಂಡು ಖುಷಿಪಟ್ಟರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…