ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ.
ದುಬಾರೆ ಸಾಕಾನೆ ಶಿಬಿರದಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಮಟ್ಟವು ಹೆಚ್ಚಾಗುತ್ತಿದ್ದು, ಪ್ರವಾಸಿಗರನ್ನು ಸಾಕಾನೆ ಶಿಬಿರಕ್ಕೆ ದೋಣಿ ಮುಖಾಂತರ ನದಿ ದಾಟಿಸುವುದು ತುಂಬಾ ಕಷ್ಟಕರವಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದುಬಾರೆ ಸಾಕಾನೆ ಶಿಬಿರಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಿ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…