ಕೊಡಗು

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು

ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಮಹಿಳೆಯನ್ನು ಭೇಟಿಯಾಗಲು ಮಂಡ್ಯದಿಂದ ಕೊಡಗಿಗೆ ಬಂದ ವ್ಯಕ್ತಿಯೊಬ್ಬನನ್ನು ರಾತ್ರಿಯಿಡೀ ಕೋಣೆಯೊಂದರಲ್ಲಿ ಕೂಡಿ ಹಾಕಿ ಹಣಕ್ಕಾಗಿ ಮೂವರು ಹಲ್ಲೆ ನಡೆಸಿದ್ದಾರೆ. ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಯುವಕ ಪೊಲೀಸರಿಗೆ ದೂರು ನೀಡಿದ್ದು, ಇದೊಂದು ಹನಿಟ್ರ್ಯಾಪ್ ಜಾಲದ ಕೃತ್ಯವಿರಬಹುದೆಂದು ಶಂಕಿಸಲಾಗಿದೆ.

ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಮಹದೇವ್ ಹಲ್ಲೆಗೊಳಗಾದ ವ್ಯಕ್ತಿ. ಈತನಿಗೆ ಫೇಸ್‌ಬುಕ್‌ನಲ್ಲಿ ಮಡಿಕೇರಿಯ ಮಹಿಳೆಯೊಬ್ಬರ ಪರಿಚಯವಾಗಿತ್ತು. ಆ ಮಹಿಳೆಯ ಭೇಟಿಗಾಗಿಯೇ ಮಡಿಕೇರಿಗೆ ಬಂದಿದ್ದ. ಒಂಟಿಯಾಗಿ ಬಂದಿದ್ದ ಮಹದೇವ್‌ನನ್ನು ಮೂವರು ಕರೆದೊಯ್ದು ಮಡಿಕೇರಿಯ ಮಂಗಳಾದೇವಿ ನಗರದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು ಎನ್ನಲಾಗಿದೆ.

ಹಣಕ್ಕಾಗಿ ಬೇಡಿಕೆ ಇರಿಸಿದ್ದ ಮೂವರು, ರಾತ್ರಿಯೆಲ್ಲಾ ಮಹದೇವ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಣ ನೀಡುವಂತೆ ಮಹದೇವ್‌ಗೆ ಒತ್ತಡ ಹೇರಿದ್ದಾರೆ. ಮೂವರಿಂದ ಮಹದೇವ್ ತಪ್ಪಿಸಿಕೊಂಡು ಅರೆಬೆತ್ತಲೆಯಾಗಿ ಮನೆಯಿಂದ ಹೊರಗೆ ಬಂದಿದ್ದು, ಮಹದೇವ್‌ನನ್ನು ಬೆನ್ನಟ್ಟಿದ ಮೂವರು ಆಟೋದಲ್ಲಿ ಅಪಹರಣ ಮಾಡಲು ಮುಂದಾಗಿದ್ದಾರೆ. ಅಪಹರಣಕ್ಕೆ ಯತ್ನಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಇದನ್ನೂ ಓದಿ:-ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಅಲ್ಲಿಂದಲೂ ಮೂವರಿಂದ ತಪ್ಪಿಸಿಕೊಂಡ ಮಹದೇವ್, ಮಡಿಕೇರಿ ನಗರ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮಹದೇವ್ ಹೇಳಿದ ಸ್ಥಳಕ್ಕೆ ಪೊಲೀಸರು ಭೇಟಿ ನೀಡುವಷ್ಟರಲ್ಲಿ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಮಹದೇವ್ ಹಲ್ಲೆಗೆ ಬಳಸಲಾಗದ ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದೊಂದು ಹನಿಟ್ರ್ಯಾಪ್ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಪ್ರಕರಣದ ಸಂಪೂರ್ಣ ಮಾಹಿತಿ ನೀಡುವುದಾಗಿ ಎಸ್‌ಪಿ ಕೆ. ರಾಮರಾಜನ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ; ಸಲೀಸಲ್ಲ ಅನುಸರಣೆ

ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…

1 hour ago

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

2 hours ago

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…

2 hours ago

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

3 hours ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

3 hours ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

3 hours ago