ಕೊಡಗು

ನಕಲಿ ಖಾತೆ | ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ; ಆರೋಪಿ ಬಂಧನ

ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ಹಾಕಿ ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದು, ಬ್ಯಾಂಕ್ ಖಾತೆಯಲ್ಲಿದ್ದ ೮೦,೦೦೦ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ ನಿವಾಸಿ ನಾಗಪ್ಪ ಹನುಮಂತ ಲಮಾಣಿ(೨೬) ಬಂಧಿತ ಆರೋಪಿ.

ನಾಗಪ್ಪ ಹನುಮಂತ ಲಮಾಣಿ ಇನ್‌ಸ್ಟಾಗ್ರಾಂನ ‘ಕೋಟ್ಯಾ ೨೦೨೬’ ಎಂಬ ಖಾತೆ ಸೃಷ್ಟಿಸಿ ಅದರಲ್ಲಿ ಮಡಿಕೇರಿ ಬಸ್ ನಿಲ್ದಾಣದ ಸುತ್ತಮುತ್ತಲಿನ ವೀಡಿಯೋ ಹಾಕಿ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ತನ್ನ ನಂಬರ್ ನೀಡಿದ್ದ. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಪ್ರಕರಣ ಸಂಬಂಧ ಎಸ್‌ಪಿ ಕೆ.ರಾಮರಾಜನ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಕೊಡಗು ಜಿಲ್ಲಾ ಪೊಲೀಸರಿಗೆ ಈ ಮಾಹಿತಿ ದೊರೆಯುತ್ತಿದ್ದಂತೆ ಸುಮೊಟೋ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು ಎಂದರು.

ಈ ಸಂಬಂಧ ವಿಶೇಷ ತಂಡ ರಚಿಸಿ ಬಾಗಲಕೋಟೆಗೆ ಕಳುಹಿಸಲಾಗಿತ್ತು. ಬಾಗಲಕೋಟೆ ಎಸ್‌ಪಿ ಸಹಕಾರದೊಂದಿಗೆ ಆರೋಪಿ ನಾಗಪ್ಪ ಹನುಮಂತ ಲಮಾಣಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಬಂಧಿತ ಆರೋಪಿ ಇದೇ ವಿಚಾರದಲ್ಲಿ ಹಿಂದೆ ಮೋಸ ಹೋಗಿ ಹಣ ಕಳೆದುಕೊಂಡಿದ್ದ. ಪುಣೆಯಲ್ಲಿ ಹುಡುಗಿಯರು ಸಿಗುತ್ತಾರೆಂದು ನಂಬಿ ೪,೦೦೦ ರೂ. ಹಾಕಿ ಮೋಸ ಹೋಗಿದ್ದ. ಬಳಿಕ ಇದನ್ನೇ ಕಸುಬಾಗಿ ಮಾಡಿಕೊಂಡ ಈತ ಅದೇ ರೀತಿ ಪೋಸ್ಟ್ ಹಾಕಿ ಹಣ ಮಾಡಲು ಮುಂದಾಗಿದ್ದ. ಕೊಡಗು ಮಾತ್ರವಲ್ಲದೆ ಮೈಸೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಇತರ ಜಿಲ್ಲೆಗಳ ಹೆಸರನ್ನೂ ಹಾಕಿ ಇದೇ ರೀತಿ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ನಂಬರ್ ನೀಡಿ ಹಣ ಪಡೆದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಬಂಧಿತನಿಂದ ೨ ಮೊಬೈಲ್ ಫೋನ್, ೫ ಸಿಮ್ ಕಾರ್ಡ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ಬ್ಯಾಂಕ್ ಖಾತೆಯಲಿದ್ದ ೮೦,೦೦೦ ರೂ. ಸೀಜ್ ಮಾಡಲಾಗಿದೆ. ಈ ತಿಂಗಳಲ್ಲೇ ೩೦ರಿಂದ ೪೦ ಸಾವಿರ ರೂ. ಸಂಗ್ರಹಿಸಿರುವುದು ಕಂಡುಬಂದಿದೆ ಎಂದು ಎಸ್‌ಪಿ ಮಾಹಿತಿ ನೀಡಿದರು.

ಸಾರ್ವಜನಿಕರು ಎಚ್ಚರ ವಹಿಸಿ
ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಸಂದೇಶ, ಭಾವಚಿತ್ರ, ವಿಡಿಯೋಗಳನ್ನು ಹಂಚಿಕೊಳ್ಳುವ ಮುನ್ನ ಸತ್ಯ-ಅಸತ್ಯತೆಯನ್ನು ಪರಿಶೀಲಿಸಿಕೊಳ್ಳಬೇಕು. ಯಾವುದೇ ರೀತಿ ಅಕ್ರಮ ಚಟುವಟಿಕೆಗಳ ಕುರಿತು ಸ್ಥಳೀಯ ಪೊಲೀಸ್ ಠಾಣೆ, ತುರ್ತು ಸಹಾಯವಾಣಿ ೧೧೨ ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಅಥವಾ ಕೆಎಸ್‌ಪಿ ತಂತ್ರಾಂಶದ ಮೂಲಕ ಮಾಹಿತಿ ನೀಡಿ ಸಹಕರಿಸಿ ಎಂದು ಎಸ್‌ಪಿ ಮನವಿ ಮಾಡಿದ್ದಾರೆ.

ಮಡಿಕೇರಿ ಉಪವಿಭಾಗ ಡಿವೈಎಸ್‌ಪಿ ಸೂರಜ್, ಮಡಿಕೇರಿ ನಗರ ವೃತ್ತ ಸಿಪಿಐ ರಾಜು, ಮಡಿಕೇರಿ ನಗರ ಪೊಲೀಸ್ ಠಾಣೆ ಪಿಎಸ್‌ಐ ಅನ್ನಪೂರ್ಣ, ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆರೋಪಿಯನ್ನು ಪತ್ತೆ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧಿಕ್ಷಕ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಬಿ.ಪಿ ದಿನೇಶ್ ಕುಮಾರ್ ಶ್ಲಾಘಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

6 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

7 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago