ಕೊಡಗು

ಮಡಿಕೇರಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ: ವಿದ್ಯಾರ್ಥಿ ಸಜೀವ ದಹನ

ಕೊಡಗು: ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಸಜೀವವಾಗಿ ದಹನಗೊಂಡಿದ್ದಾನೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಾಟಗೇರಿ ಗ್ರಾಮದ ಹರಿಮಂದಿರ ವಸತಿ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್‌ ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ.

ಇಂದು ಮುಂಜಾನೆ 4-5 ಗಂಟೆ ಸುಮಾರಿಗೆ ವಸತಿ ಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾಲೆಯ ವಸತಿ ಗೃಹದಲ್ಲಿ ಒಟ್ಟು 53 ಮಂದಿ ನೆಲೆಸಿದ್ದರು. ಆದರೆ ಓರ್ವ ಬಾಲಕ ಮಾತ್ರ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾನೆ. ಬಾಲಕ 2ನೇ ತರಗತಿಯಲ್ಲಿ ಓದುತ್ತಿದ್ದನು. ಮಗನನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಶಾರ್ಟ್‌ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

5 mins ago

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

2 hours ago

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…

2 hours ago

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

3 hours ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

3 hours ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

4 hours ago