ಕೊಡಗು

ಕೊಡಗಿನಲ್ಲಿ ಪ್ರವಾಹ ಪರಿಸ್ಥಿತಿ ; ರಸ್ತೆ ಸಂಪರ್ಕ ಕಡಿತ; ರೆಡ್ ಅಲರ್ಟ್ ಘೋಷಣೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆಯಿಂದ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕಾವೇರಿ, ಲಕ್ಷ ಣ ತೀರ್ಥ ಸೇರಿದಂತೆ ನದಿ ತೊರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಲವೆಡೆ ಗದ್ದೆಗಳಿಗೆ ಪ್ರವಾಹದ ನೀರು ನುಗ್ಗಿದ್ದು, ವಿವಿಧೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಭಾಗಮಂಡಲ ವ್ಯಾಪ್ತಿಯಲ್ಲಿಯೂ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಮತ್ತೊಮ್ಮೆ ಭರ್ತಿಯಾಗಿದೆ.

ಕೊಂಡಂಗೇರಿಯಿಂದ ಅಮ್ಮತ್ತಿ ರಸ್ತೆಯಲ್ಲಿ ನೀರು ತುಂಬಿ ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೊಟ್ಟಮುಡಿ ಜಂಕ್ಷನ್ ಬಳಿ ರಸ್ತೆಯಲ್ಲಿ ನೀರು ವ್ಯಾಪಿಸಿದೆ. ಪೊನ್ನಂಪೇಟೆ ಹೋಬಳಿಯ ಕಾನೂರು ಗ್ರಾಮದ ರಸ್ತೆಯು ಜಲಾವೃತಗೊಂಡಿದೆ. ನಾಪೋಕ್ಲು-ಚೆರಿಯಪರಂಬು ರಸ್ತೆ ಜಲಾವೃತವಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಮೂರ್ನಾಡು-ಅಮ್ಮತ್ತಿ ರಸ್ತೆಯ ಮೇಲೆ ನೀರು ಹರಿಯುತ್ತಿದೆ.

ಎಮ್ಮೆಮಾಡುವಿನಲ್ಲಿ ಕಾವೇರಿ ನದಿ ಅಪಾಯದಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ. ದೋಣಿಕಡವು ವ್ಯಾಪ್ತಿಯಲ್ಲಿಯೂ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಗದ್ದೆಗಳು ಜಲಾವೃತಗೊಂಡಿವೆ. ಎಡಪಾಲ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಸಮೀಪದ ತೋಟಗಳಿಗೆ ನೀರು ನುಗ್ಗಿದೆ. ಕಡಂಗ ಪಾರಾಣೆ ಮುಖ್ಯರಸ್ತೆಯ ಬೆಳ್ಳುಮಾಡುವಿನಲ್ಲಿಯೂ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಕ್ಕಬ್ಬೆ-ವಿರಾಜಪೇಟೆ ರಸ್ತೆಯಲ್ಲಿಯೂ ಪ್ರವಾಹ ವ್ಯಾಪಿಸಿದೆ.

ಎಮ್ಮೆಮಾಡು ಗ್ರಾಮದ ಕದಿಸಮ್ಮ ಎಂಬವರ ವಾಸದ ಮನೆಯ ಅಡುಗೆ ಮನೆಯ ಒಂದು ಭಾಗದ ಗೋಡೆ ಕುಸಿದು ಬಿದ್ದು, ಹಾನಿಯಾಗಿದೆ. ಹಾಗೂ ಮನೆಯ ಗೋಡೆ ಬಿರುಕು ಬಿಟ್ಟಿದೆ. ಕಿರುಂದಾಡು ಗ್ರಾಮದ ದೇವಜನ ಪುಷ್ಪವೇಣಿ ಅವರ ವಾಸದ ಮನೆಯ ಒಂದು ಭಾಗದ ಗೋಡೆ ಕುಸಿದು ಬಿದ್ದಿದೆ. ಅರಪಟ್ಟು ಗ್ರಾಮದ ಜುನೈದ್ ಅವರ ವಾಸದ ಮನೆ ಪಕ್ಕದಲ್ಲಿ ಬರೆ ಜರಿದು ಮನೆಯ ಹಿಂಭಾಗ ಮಣ್ಣು ಕುಸಿದಿದೆ.

ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದು, ಅಂದಾಜು ರಸ್ತೆಯ ಮೇಲೆ ೪ ಅಡಿಗಳಷ್ಟು ನೀರು ಹರಿಯುತ್ತಿದೆ. ಈ ಸಂಬಂಧ ಕಂದಾಯ ಪರಿವೀಕ್ಷಕರು ಸ್ಥಳ ಪರಿಶೀಲನೆ ನಡೆಸಿ ಅಪಾಯದ ಸ್ಥಳಗಳಿಗೆ ತೆರಳದಂತೆ ಹಾಗೂ ಆ ಭಾಗದ ಜನರಿಗೆ ಕಾಳಜಿ ಕೇಂದ್ರಕ್ಕೆ ಬರುವಂತೆ ಸೂಚಿಸಿದರು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜಿಲ್ಲೆಯ ಮಳೆ ವಿವರ
ಕಳೆದ ೨೪ ಗಂಟೆಗಳ ಅವಽಯಲ್ಲಿ ಜಿಲ್ಲೆಯಲ್ಲಿ ಸರಾಸರಿ ೯೨.೫೫ ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ೭೯ ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ ೧೩೦.೧೦ ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ ೧೪೧.೨೯ ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ ೯೮.೪೫ ಮಿ.ಮೀ., ಕುಶಾಲನಗರ ತಾಲ್ಲೂಕಿನಲ್ಲಿ ೧೩.೯೦ ಮಿ.ಮೀ. ಸರಾಸರಿ ಮಳೆಯಾಗಿದೆ. ಮಡಿಕೇರಿ ಕಸಬಾ ೩೬, ನಾಪೋಕ್ಲು ೧೫೬.೬೦, ಸಂಪಾಜೆ ೩೪, ಭಾಗಮಂಡಲ ೮೯.೪೦, ವಿರಾಜಪೇಟೆ ೧೪೯.೨೦, ಅಮ್ಮತ್ತಿ ೧೧೧, ಹುದಿಕೇರಿ ೨೨೬.೭೦, ಶ್ರೀಮಂಗಲ ೨೧೭.೪೦, ಪೊನ್ನಂಪೇಟೆ ೭೦, ಬಾಳೆಲೆ ೫೧.೦೭, ಸೋಮವಾರಪೇಟೆ ೮೦.೮೦, ಶನಿವಾರಸಂತೆ ೬೮, ಶಾಂತಳ್ಳಿ ೧೭೨, ಕೊಡ್ಲಿಪೇಟೆ ೭೩, ಕುಶಾಲನಗರ ೪.೬೦, ಸುಂಟಿಕೊಪ್ಪ ದಲ್ಲಿ ೨೩.೨೦ ಮಿ.ಮೀ. ಮಳೆಯಾಗಿದೆ.

ಹಾರಂಗಿ ನೀರಿನ ಮಟ್ಟ
ಜಲಾಶಯದ ಗರಿಷ್ಠ ಮಟ್ಟ ೨,೮೫೯ ಅಡಿ
ಇಂದಿನ ನೀರಿನ ಮಟ್ಟ ೨೮೫೧ ಅಡಿ
ಕಳೆದ ವರ್ಷ ಇದೇ ದಿನ ೨೮೩೦.೬೨ ಅಡಿ
ನೀರಿನ ಒಳಹರಿವು ೭೬೮೯ ಕ್ಯೂಸೆಕ್ಸ್
ನೀರಿನ ಹೊರ ಹರಿವು ೮೫೪೧ ಕ್ಯೂಸೆಕ್ಸ್

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

8 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

8 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

8 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

8 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago