ಕೊಡಗು

ಮಡಿಕೇರಿ | ಅಂಚೆ‌ ಕಚೇರಿ‌ ಸೇರಿದಂತೆ ವಿವಿಧೆಡೆ ಕಳವು; ಮೂವರ ಬಂಧನ

ಮಡಿಕೇರಿ: ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟ್ಟಂಗಾಲ ಗ್ರಾಮದ ಅಂಚೆ ಕಚೇರಿ ಸೇರಿದಂತೆ ವಿವಿಧೆಡೆ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಕಕ್ಕಬ್ಬೆ ಗ್ರಾಮದ ನಾಲಡಿ ಕೆ.ಸಿ. ಅಶೋಕ(35), ಸೋಮವಾರಪೇಟೆ ಕಿಬ್ಬೆಟ್ಟ ಗ್ರಾಮದ ಕೆ.ಪಿ. ಕೀರ್ತಿ(25), ಸೋಮವಾರಪೇಟೆ ರೇಂಜರ್ ಬ್ಲಾಕ್‌ನ ರಿಯಾಜ್(26) ಬಂಧಿತ ಆರೋಪಿಗಳು.

2024ರ ನ.30ರಂದು ಬಿಟ್ಟಂಗಾಲ ಗ್ರಾಮದ ಅಂಚೆ ಕಚೇರಿಯ ಬಾಗಿಲು ಮುರಿದು ಖಜಾನೆ ಬಾಕ್ಸ್, ಸ್ಟಾಂಪ್‌ಗಳು, ಅಂಚೆ ಪಾಸ್ ಪುಸ್ತಕಗಳು ಮತ್ತು ಸಿಸಿಟಿವಿಯ ಡಿವಿಆರ್ ಅನ್ನು ಕಳವು ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಜೊತೆಗೆ ಬಿಟ್ಟಂಗಾಲ ಗ್ರಾಮದ ನಿವಾಸಿ ಮಾಚಯ್ಯ ಎಂಬುವವರ ಮನೆಯ ಶೆಡ್‌ನಲ್ಲಿ ನಿಲ್ಲಿಸಿದ್ದ ಕೆಎ-04-ಎನ್-5010 ಸಂಖ್ಯೆಯ ಮಾರುತಿ ಓಮಿನಿ ವಾಹನ ಕಳ್ಳತನವಾಗಿರುವ ಬಗ್ಗೆಯೂ ದೂರು ಸ್ವೀಕರಿಸಲಾಗಿತ್ತು. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ಅಧಿಕಾರಿ, ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಅಪರಾಧ ಕೃತ್ಯಕ್ಕೆ ಸಂಬಧಿಸಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆಹಾಕಿದ್ದರು.

ಪ್ರಕರಣಗಳ ಆರೋಪಿಗಳ ಪತ್ತೆಯ ಸಲುವಾಗಿ ವಿರಾಜಪೇಟೆ ಡಿಎಸ್‌ಪಿ ಮಹೇಶ್ ಕುಮಾರ್, ಸಿಪಿಐ ಅನೂಪ್ ಮಾದಪ್ಪ, ಪಿಎಸ್‌ಐಗಳಾದ ಲತಾ, ವಾಣಿಶ್ರೀ, ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು & ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ‌ ಸಂಬಂಧ ಮಾಹಿತಿ ಸಂಗ್ರಹಿಸಿ ಫೆ.10ರಂದು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸದರಿ ಆರೋಪಿಗಳು ಗೋಣಿಕೊಪ್ಪ, ಭಾಗಮಂಡಲ, ಮಡಿಕೇರಿ ಗ್ರಾಮಾಂತರ ಹಾಗೂ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಚಿನ್ನ-ಬೆಳ್ಳಿ ಆಭರಣಗಳು, ದ್ವಿಚಕ್ರ ವಾಹನ ಹಾಗೂ ಮರ ಕುಯ್ಯುವ ಯಂತ್ರವನ್ನು ಕಳ್ಳತನ ನಡೆಸಿರುವುದು ಕೂಡ ತನಿಖೆಯಲ್ಲಿ ಕಂಡುಬಂದಿದೆ.
ಬಂಧಿತರಿಂದ ಸಿಸಿಟಿವಿ ಡಿವಿಆರ್ & ಖಜಾನೆ ಬಾಕ್ಸ್ ಮತ್ತು ರೂ.930 ಮೌಲ್ಯದ ಸ್ಟಾಂಪ್‌ಗಳು, ಮಾರುತಿ ಕಾರು, ಎರಡು ದ್ವಿಚಕ್ರ ವಾಹನಗಳು, ಮರ ಕುಯ್ಯುವ ಯಂತ್ರ, 1 ಏರ್ ಗನ್, 200 ಕೆ.ಜಿ. ಕಾಫಿ, ಕಾಳುಮೆಣಸು 250 ಕೆ.ಜಿ., 30 ಗ್ರಾಂ ಚಿನ್ನ, 229 ಗ್ರಾಂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಸ್‌ಪಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

51 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

2 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

2 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

2 hours ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

2 hours ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago