ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ ಪರವಾನಗಿಯನ್ನು ರದ್ದು ಮಾಡಲಾಗಿದೆ.
ವಿದೇಶಿ ಮಹಿಳೆ ಮೇಲೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದಲ್ಲಿ ಅಮೆರಿಕ ಮೂಲದ ಮಹಿಳೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರವಾಸೋದ್ಯಮ ಇಲಾಖೆ, ಆರೋಪಿತ ಹೋಂಸ್ಟೇಯ ಪರವಾನಗಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಕಳೆದ ಕೆಲವು ದಿನಗಳ ಹಿಂದೆ ವಾಷಿಂಗ್ಟನ್ ಮೂಲದ ಮಹಿಳೆಯೊಬ್ಬರು ಪ್ರವಾಸಕ್ಕಾಗಿ ಕುಟ್ಟ ಗ್ರಾಮದ ಖಾಸಗಿ ಹೋಂಸ್ಟೇಗೆ ಬಂದಿದ್ದರು. ಈ ವೇಳೆ ಹೋಂಸ್ಟೇಯ ಕುಕ್ ಆಗಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಮಹಿಳೆಯ ಪಾನೀಯಕ್ಕೆ ಮಾದಕ ದ್ರವ್ಯ ಬೆರೆಸಿ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಘಟನೆ ನಡೆದ ಬಳಿಕ ಮಹಿಳೆ ಸಹಾಯಕ್ಕಾಗಿ ಯತ್ನಿಸಿದಾಗ, ಹೋಂಸ್ಟೇ ಮಾಲೀಕ ವಿಶಾಲ್ ಸುಮಾರು ಮೂರು ದಿನಗಳ ಕಾಲ ವೈಫೈ ಸಂಪರ್ಕ ಕಡಿತಗೊಳಿಸಿ, ಮಹಿಳೆಗೆ ಹೊರಗಿನ ಜಗತ್ತಿನೊಂದಿಗೆ ಸಂಪರ್ಕ ಸಾಧಿಸಲು ಬಿಡದೆ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈಗಾಗಲೇ ವೃಜೇಶ್ ಕುಮಾರ್ ಹಾಗೂ ಮಾಲೀಕ ವಿಶಾಲ್ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪ್ರವಾಸೋದ್ಯಮ ಇಲಾಖೆಯು, ಪ್ರವಾಸಿಗರ ಸುರಕ್ಷತೆಯಲ್ಲಿ ವಿಫಲವಾದ ಮತ್ತು ಅಕ್ರಮ ಎಸಗಿದ ಹಿನ್ನೆಲೆಯಲ್ಲಿ 2024ರ ಜನವರಿಯಲ್ಲಷ್ಟೇ ಪರವಾನಗಿ ಪಡೆದಿದ್ದ ಈ ಹೋಂಸ್ಟೇಯನ್ನು ಬಂದ್ ಮಾಡಿದೆ. ಜಿಲ್ಲೆಯ ಎಲ್ಲಾ ಹೋಂಸ್ಟೇಗಳು ಕಡ್ಡಾಯವಾಗಿ ಪ್ರವಾಸಿಗರ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…