ಕೊಡಗು

ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಮುಷ್ಕರ ; ಬೇಡಿಕೆ ಪರಿಶೀಲಿಸುವ ಭರವಸೆ ನೀಡಿದ ಸಚಿವರು

ಮಡಿಕೇರಿ: ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಮುಷ್ಕರ ಹಿನ್ನೆಲೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ ನೀಡಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಸಂರಕ್ಷಣಾಧಿಕಾರಿ, ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯಶಾಸ್ತ್ರ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವ ಕುರಿತು ಮನವಿ ಸಲ್ಲಿಸಿದರು.

ಇದನ್ನು ಓದಿ: ಮೇಲುಕೋಟೆ | ನ.9ಕ್ಕೆ ಉಪರಾಷ್ಟ್ರಪತಿ ಆಗಮನ ; ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು ಹಾಗೂ ಶಾಸಕರು, ವಿದ್ಯಾರ್ಥಿಗಳ ಬೇಡಿಕೆ ಬಗ್ಗೆ ಚರ್ಚಿಸಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳ ಬೇಡಿಕೆಗಳ ಬಗ್ಗೆ ಪರಿಗಣಿಸುತ್ತೇವೆ ಎಂದು ಭರವಸೆ ನೀಡಿದರಲ್ಲದೆ, ಮುಷ್ಕರವನ್ನು ಕೈ ಬಿಡಲು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಉನ್ನತ ಅಽಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

2 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

4 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

13 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

13 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

13 hours ago