ಕೊಡಗು

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು 

ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ ಟಾಟಾ ಕಾಫಿ ಮಾರ್ಗೋಳ್ಳಿ ಎಸ್ಟೇಟ್ ಹಾಗೂ ಮೈಲಪುರ ಎಸ್ಟೇಟ್‌ಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದೆ.

ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ, ತೆಂಗು, ಕಾಫಿ ಹಾಗೂ ಬಾಳೆ ಬೆಳೆಗಳನ್ನು ನಾಶಪಡಿಸುತ್ತಿದ್ದ ಸುಮಾರು 16 ಕ್ಕೂ ಹೆಚ್ಚು ಕಾಡಾನೆಗಳು (03 ಮರಿಗಳು ಸೇರಿ) ಇರುವ ಎರಡು ಪ್ರತ್ಯೇಕ ಹಿಂಡುಗಳನ್ನು ಕಾರ್ಯಾಚರಣೆ ಮೂಲಕ ಮಾಲ್ದಾರೆ ಮೀಸಲು ಅರಣ್ಯಕ್ಕೆ ಹಿಮ್ಮೆಟ್ಟಿಸಲಾಯಿತು.

ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಗಳ ಸೂಚನೆ ಮೇರೆಗೆ ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಜಗನ್ನಾಥ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಗೋಪಾಲ್ ಕೆ.ಪಿ. ಅವರ ನಿರ್ದೇಶನದಲ್ಲಿ, ವಲಯ ಅರಣ್ಯ ಅಧಿಕಾರಿ ಶ್ರೀ ಗಂಗಾಧರ್ ಅವರ ಮಾರ್ಗದರ್ಶನದಲ್ಲಿ ಚೆನ್ನಂಗಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಶಶಿ ಪಿ.ಟಿ. ಹಾಗೂ ದೇವರಾಜ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಕಾರ್ಯಾಚರಣೆಯಲ್ಲಿ ಆರ್‌ಆರ್‌ಟಿ ತಂಡದ ಶಂಕರ್, ಪ್ರಜ್ವಲ್, ಈಟಿಎಫ್ ಉಪ ವಲಯ ಅರಣ್ಯಾಧಿಕಾರಿ ದೇವರಾಜ್ ಮತ್ತು ಸಿಬ್ಬಂದಿಗಳು, ಟಾಟಾ ಕಾಫಿ ವನ್ಯಜೀವಿ ವಿಭಾಗದ ವ್ಯವಸ್ಥಾಪಕ ಕಾರ್ತಿಕ್ ಕೃಷ್ಣ, ಮಾರ್ಗೋಳ್ಳಿ ಎಸ್ಟೇಟ್ ಸಹಾಯಕ ವ್ಯವಸ್ಥಾಪಕ ಅನುಷ್ ಭಾಗವಹಿಸಿದ್ದರು.

ಇದೇ ವೇಳೆ ದುಬಾರೆ ಮೀಸಲು ಅರಣ್ಯಕ್ಕೆ ಹಿಮ್ಮೆಟ್ಟಿಸಲಾದ ಕಾಡಾನೆಗಳ ಹಿಂಡು ರಾತ್ರಿ ವೇಳೆ ಮತ್ತೆ ಕಾಡು ದಾಟಿ ತೋಟಗಳಿಗೆ ಲಗ್ಗೆ ಇಡುತ್ತಿರುವುದರಿಂದ ಅಪಾರ ಪ್ರಮಾಣದ ಕೃಷಿ ನಷ್ಟ ಸಂಭವಿಸುವ ಆತಂಕವಿದೆ. ಈ ಹಿನ್ನೆಲೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ತೋಟದ ಮಾಲೀಕರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

2 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

2 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

2 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago