ನವೀನ್ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು
ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ ಟಾಟಾ ಕಾಫಿ ಮಾರ್ಗೋಳ್ಳಿ ಎಸ್ಟೇಟ್ ಹಾಗೂ ಮೈಲಪುರ ಎಸ್ಟೇಟ್ಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದೆ.
ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ, ತೆಂಗು, ಕಾಫಿ ಹಾಗೂ ಬಾಳೆ ಬೆಳೆಗಳನ್ನು ನಾಶಪಡಿಸುತ್ತಿದ್ದ ಸುಮಾರು 16 ಕ್ಕೂ ಹೆಚ್ಚು ಕಾಡಾನೆಗಳು (03 ಮರಿಗಳು ಸೇರಿ) ಇರುವ ಎರಡು ಪ್ರತ್ಯೇಕ ಹಿಂಡುಗಳನ್ನು ಕಾರ್ಯಾಚರಣೆ ಮೂಲಕ ಮಾಲ್ದಾರೆ ಮೀಸಲು ಅರಣ್ಯಕ್ಕೆ ಹಿಮ್ಮೆಟ್ಟಿಸಲಾಯಿತು.
ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಗಳ ಸೂಚನೆ ಮೇರೆಗೆ ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಜಗನ್ನಾಥ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಗೋಪಾಲ್ ಕೆ.ಪಿ. ಅವರ ನಿರ್ದೇಶನದಲ್ಲಿ, ವಲಯ ಅರಣ್ಯ ಅಧಿಕಾರಿ ಶ್ರೀ ಗಂಗಾಧರ್ ಅವರ ಮಾರ್ಗದರ್ಶನದಲ್ಲಿ ಚೆನ್ನಂಗಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಶಶಿ ಪಿ.ಟಿ. ಹಾಗೂ ದೇವರಾಜ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಕಾರ್ಯಾಚರಣೆಯಲ್ಲಿ ಆರ್ಆರ್ಟಿ ತಂಡದ ಶಂಕರ್, ಪ್ರಜ್ವಲ್, ಈಟಿಎಫ್ ಉಪ ವಲಯ ಅರಣ್ಯಾಧಿಕಾರಿ ದೇವರಾಜ್ ಮತ್ತು ಸಿಬ್ಬಂದಿಗಳು, ಟಾಟಾ ಕಾಫಿ ವನ್ಯಜೀವಿ ವಿಭಾಗದ ವ್ಯವಸ್ಥಾಪಕ ಕಾರ್ತಿಕ್ ಕೃಷ್ಣ, ಮಾರ್ಗೋಳ್ಳಿ ಎಸ್ಟೇಟ್ ಸಹಾಯಕ ವ್ಯವಸ್ಥಾಪಕ ಅನುಷ್ ಭಾಗವಹಿಸಿದ್ದರು.
ಇದೇ ವೇಳೆ ದುಬಾರೆ ಮೀಸಲು ಅರಣ್ಯಕ್ಕೆ ಹಿಮ್ಮೆಟ್ಟಿಸಲಾದ ಕಾಡಾನೆಗಳ ಹಿಂಡು ರಾತ್ರಿ ವೇಳೆ ಮತ್ತೆ ಕಾಡು ದಾಟಿ ತೋಟಗಳಿಗೆ ಲಗ್ಗೆ ಇಡುತ್ತಿರುವುದರಿಂದ ಅಪಾರ ಪ್ರಮಾಣದ ಕೃಷಿ ನಷ್ಟ ಸಂಭವಿಸುವ ಆತಂಕವಿದೆ. ಈ ಹಿನ್ನೆಲೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ತೋಟದ ಮಾಲೀಕರು ಒತ್ತಾಯಿಸಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…