ಕೊಡಗು

ಕೊಡಗಿನಲ್ಲಿ ಅರಣ್ಯ ಅತಿಕ್ರಮಣ ತೆರವು ಕಾರ್ಯ ಶುರು

ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿಕೆ ಬೆನ್ನಲ್ಲೇ ಅರಣ್ಯ ಇಲಾಖೆ ಒತ್ತುವರಿ ತೆರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ.

ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 5,551 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದ್ದು, ಸಚಿವ ಈಶ್ವರ್‌ ಖಂಡ್ರೆ ಸೂಚನೆ ಮೇರೆಗೆ ಈಗ ತೆರವು ಕಾರ್ಯ ಶುರು ಮಾಡಲಾಗಿದೆ.

ಕೇರಳದ ವಯನಾಡು ಭೂಕುಸಿತ ದುರಂತದಿಂದ ಎಚ್ಚೆತ್ತ ರಾಜ್ಯ ಸರ್ಕಾರ ರಾಜ್ಯದಲ್ಲಿ ಅರಣ್ಯ ಒತ್ತುವರಿ, ಅಕ್ರಮ ತೋಟಗಳು ಹಾಗೂ ಅನಧಿಕೃತ ರೆಸಾರ್ಟ್‌ಗಳ ವಿರುದ್ಧ ಕ್ರಮ ಜರುಗಿಸಲು ಮುಂದಾಗಿದೆ.

ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಅರಣ್ಯ ಒತ್ತುವರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅವುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಅದರಂತೆ 2015ರ ನಂತರದ ಪ್ರಕರಣಗಳನ್ನು ಗುರುತಿಸಿ ಅರಣ್ಯ ಒತ್ತುವರಿ ತೆರವುಗೊಳಿಸಲಾಗುತ್ತಿದ್ದು, ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾಕಷ್ಟು ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನು ಕೊಡಗು ಜಿಲ್ಲೆಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಒತ್ತುವರಿ ಮಾಡಿಕೊಂಡಿರುವ ಪ್ರಕರಣಗಳು ತೀರಾ ಕಡಿಮೆಯಿವೆ. ಬಹುತೇಕ ಪ್ರಕರಣಗಳು ಕಾಫಿ ತೋಟ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವುದಾಗಿದೆ. ಅದರಲ್ಲಿಯೂ ಸಣ್ಣ ಪ್ರಮಾಣದ ಒತ್ತುವರಿ ಪ್ರಕರಣಗಳೇ ಹೆಚ್ಚಿದ್ದು, ಇಂತಹ ಪ್ರಕರಣಗಳ ಒತ್ತುವರಿ ತೆರವು ಕಾರ್ಯ ಶುರುವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

6 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

7 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

9 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

9 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

9 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

10 hours ago