ಕೊಡಗು

ಕೊಡಗಿನಲ್ಲಿ ಅರಣ್ಯ ಅತಿಕ್ರಮಣ ತೆರವು ಕಾರ್ಯ ಶುರು

ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿಕೆ ಬೆನ್ನಲ್ಲೇ ಅರಣ್ಯ ಇಲಾಖೆ ಒತ್ತುವರಿ ತೆರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ.

ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 5,551 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದ್ದು, ಸಚಿವ ಈಶ್ವರ್‌ ಖಂಡ್ರೆ ಸೂಚನೆ ಮೇರೆಗೆ ಈಗ ತೆರವು ಕಾರ್ಯ ಶುರು ಮಾಡಲಾಗಿದೆ.

ಕೇರಳದ ವಯನಾಡು ಭೂಕುಸಿತ ದುರಂತದಿಂದ ಎಚ್ಚೆತ್ತ ರಾಜ್ಯ ಸರ್ಕಾರ ರಾಜ್ಯದಲ್ಲಿ ಅರಣ್ಯ ಒತ್ತುವರಿ, ಅಕ್ರಮ ತೋಟಗಳು ಹಾಗೂ ಅನಧಿಕೃತ ರೆಸಾರ್ಟ್‌ಗಳ ವಿರುದ್ಧ ಕ್ರಮ ಜರುಗಿಸಲು ಮುಂದಾಗಿದೆ.

ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಅರಣ್ಯ ಒತ್ತುವರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅವುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಅದರಂತೆ 2015ರ ನಂತರದ ಪ್ರಕರಣಗಳನ್ನು ಗುರುತಿಸಿ ಅರಣ್ಯ ಒತ್ತುವರಿ ತೆರವುಗೊಳಿಸಲಾಗುತ್ತಿದ್ದು, ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾಕಷ್ಟು ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನು ಕೊಡಗು ಜಿಲ್ಲೆಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಒತ್ತುವರಿ ಮಾಡಿಕೊಂಡಿರುವ ಪ್ರಕರಣಗಳು ತೀರಾ ಕಡಿಮೆಯಿವೆ. ಬಹುತೇಕ ಪ್ರಕರಣಗಳು ಕಾಫಿ ತೋಟ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವುದಾಗಿದೆ. ಅದರಲ್ಲಿಯೂ ಸಣ್ಣ ಪ್ರಮಾಣದ ಒತ್ತುವರಿ ಪ್ರಕರಣಗಳೇ ಹೆಚ್ಚಿದ್ದು, ಇಂತಹ ಪ್ರಕರಣಗಳ ಒತ್ತುವರಿ ತೆರವು ಕಾರ್ಯ ಶುರುವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದೇಶದಲ್ಲಿ ಸಾಕಷ್ಟು ತೈಲ ದಾಸ್ತಾನು : ವಾಣಿಜ್ಯ ಅನಿಲ ಪೂರೈಕೆಯಲ್ಲಿ ಶೇ.70%ಕ್ಕೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು…

2 mins ago

30 ಕೆಜಿ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆ, ಇಬ್ಬರ ಬಂಧನ

ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…

1 hour ago

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…

2 hours ago

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

4 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

6 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

6 hours ago