ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿಕೆ ಬೆನ್ನಲ್ಲೇ ಅರಣ್ಯ ಇಲಾಖೆ ಒತ್ತುವರಿ ತೆರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ.
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 5,551 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದ್ದು, ಸಚಿವ ಈಶ್ವರ್ ಖಂಡ್ರೆ ಸೂಚನೆ ಮೇರೆಗೆ ಈಗ ತೆರವು ಕಾರ್ಯ ಶುರು ಮಾಡಲಾಗಿದೆ.
ಕೇರಳದ ವಯನಾಡು ಭೂಕುಸಿತ ದುರಂತದಿಂದ ಎಚ್ಚೆತ್ತ ರಾಜ್ಯ ಸರ್ಕಾರ ರಾಜ್ಯದಲ್ಲಿ ಅರಣ್ಯ ಒತ್ತುವರಿ, ಅಕ್ರಮ ತೋಟಗಳು ಹಾಗೂ ಅನಧಿಕೃತ ರೆಸಾರ್ಟ್ಗಳ ವಿರುದ್ಧ ಕ್ರಮ ಜರುಗಿಸಲು ಮುಂದಾಗಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅರಣ್ಯ ಒತ್ತುವರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅವುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅದರಂತೆ 2015ರ ನಂತರದ ಪ್ರಕರಣಗಳನ್ನು ಗುರುತಿಸಿ ಅರಣ್ಯ ಒತ್ತುವರಿ ತೆರವುಗೊಳಿಸಲಾಗುತ್ತಿದ್ದು, ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾಕಷ್ಟು ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಇನ್ನು ಕೊಡಗು ಜಿಲ್ಲೆಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಒತ್ತುವರಿ ಮಾಡಿಕೊಂಡಿರುವ ಪ್ರಕರಣಗಳು ತೀರಾ ಕಡಿಮೆಯಿವೆ. ಬಹುತೇಕ ಪ್ರಕರಣಗಳು ಕಾಫಿ ತೋಟ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವುದಾಗಿದೆ. ಅದರಲ್ಲಿಯೂ ಸಣ್ಣ ಪ್ರಮಾಣದ ಒತ್ತುವರಿ ಪ್ರಕರಣಗಳೇ ಹೆಚ್ಚಿದ್ದು, ಇಂತಹ ಪ್ರಕರಣಗಳ ಒತ್ತುವರಿ ತೆರವು ಕಾರ್ಯ ಶುರುವಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…