ಕೊಡಗು

ಕಾವೇರಿ ನದಿ ತೀರದ ಪ್ರದೇಶಗಳಿಗೆ ಮಾಜಿ ಸಚಿವ ಡಾ.ಅಶ್ವಥ್ ನಾರಾಯಣ್ ಭೇಟಿ

ಮಡಿಕೇರಿ: ಭಾರೀ ಮಳೆಯಿಂದ ಪ್ರವಾಹಕ್ಕೆ ಒಳಗಾಗಿರುವ ಕಾವೇರಿ ನದಿ ತೀರದ ಪ್ರದೇಶಗಳಿಗೆ ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ವೇಳೆ ಸಿದ್ದಾಪುರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದರು. ಈ ವೇಳೆ ಸಂತ್ರಸ್ತರು ಶಾಶ್ವತ ಪುನರ್ವಸತಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್, ಕಾಂಗ್ರೆಸ್ ಸರ್ಕಾರ ಪರಿಹಾರ ವಿತರಣೆಗೆ ವಿಳಂಬ ಮಾಡುವುದು ಸರಿಯಲ್ಲ. ಕೂಡಲೇ ಸಂತ್ರಸ್ತರ ಬೇಡಿಕೆಯನ್ನು ಈಡೇರಿಸಿ ಶಾಶ್ವತ ಪುನರ್ ವಸತಿ ಕಲ್ಪಿಸಲಿ ಎಂದು ಒತ್ತಾಯಿಸಿದರು.

ಈ ಹಿಂದೆ ಶಾಶ್ವತ ಪರಿಹಾರದ ಚಿಂತನೆ ಮಾಡಿ ಜಾಗ ಗುರುತಿಸಲಾಗಿತ್ತು. ಸಂತ್ರಸ್ತರು ಸ್ಥಳದಿಂದ ತೆರಳಲು ಮುಂದಾಗಿರಲಿಲ್ಲ. ಆದರೆ, ಈಗ ಸಂತ್ರಸ್ತರು ಪುನರ್ ವಸತಿ ಸ್ಥಳಗಳಿಗೆ ತೆರಳಲು ಒಪ್ಪಿದ್ದಾರೆ. ಸರ್ಕಾರ ಆದಷ್ಟು ಬೇಗ ಶಾಶ್ವತ ವ್ಯವಸ್ಥೆಯನ್ನು ಮಾಡಬೇಕು ಎಂದರು.

ಎಂ.ಎಲ್‌.ಸಿ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ ಜಿ ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಿ.ಕೆ ಲೋಕೇಶ್ ಸೇರಿದಂತೆ ಮುಖಂಡರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

1 hour ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

2 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

2 hours ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

2 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

2 hours ago