ಪ್ರಶಾಂತ್ ಎನ್ ಮಲ್ಲಿಕ್
ಕೊಡಗು: ವಿನಯ್ ಸೋಮಯ್ಯ ಪ್ರಧಾನಿ ಮೋದಿ ಅವರ ಅಪ್ಪಟ ಅಭಿಮಾನಿ. ಆತ ಬಿಜೆಪಿಗ ಅಂತಲೇ ಅವನ ವಿರುದ್ಧ ಎಫ್ಐಆರ್ ಹಾಕಿಸಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿನಯ್ ಆತ್ಮಹತ್ಯೆ ಮಾಡಿಕೊಂಡು 4 ದಿನ ಆದರೂ ಯಾರು ಅರೆಸ್ಟ್ ಕೂಡ ಆಗಿಲ್ಲ. ವಿನಯ್ಗೆ ಪೊಲೀಸರು ಕರೆ ಮಾಡಿ 107 ರೌಡಿ ಶೀಟರ್ ಹಾಕುವ ಬೆದರಿಕೆ ಹಾಕಿದ್ದಾರೆ. ಕಳೆದ ಮಾರ್ಚ್.21ರಂದು ಬೆಳಗ್ಗೆ 10:09 ಗಂಟೆಗೆ ಕರೆ ಮಾಡಿ 2:45 ನಿಮಿಷ ಮಾತನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಡಗು ಎಸ್ಪಿ ಅವರಿಗೆ ಧಮ್ಕಿ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಮನವಿ ಪತ್ರ ನೀಡಿದ್ದೇವೆ ಎಂದರು.
ಇನ್ನು ಚುನಾವಣೆಯಲ್ಲಿ 5 ಬಾರಿ ತಿಪ್ಪೆಗೆ ಎಸೆದ್ರು ಬುದ್ದಿ ಬಂದಿಲ್ಲ. ಅವನ ಹೆಸರು ಹೇಳಬೇಡಿ, ಕೊಳಕು ಬಾಯಿಯವನು ಅವನು ಎಂದು ಲಕ್ಷ್ಮಣ್ ವಿರುದ್ಧ ಕಿಡಿಕಾರಿದ ಅವರು, ಅಂತಹ ನಾಯಿಗಳನ್ನು ದುಡ್ಡು ಕೊಟ್ಟು ಕರೆಸಿ ಪೊನ್ನಣ್ಣ ನಮಗೆ ಬಯ್ಯಿಸುತ್ತಾರೆ. ಕಾಸು ಕೊಟ್ಟು ಪೊನ್ನಣ್ಣ ಲಕ್ಷ್ಮಣ್, ತೆನ್ನಿರ ಮೈನಾ, ಹರೀಶ್ ಪೂವಯ್ಯರಿಂದ ಇದನ್ನು ಮಾಡಿಸುತ್ತಿದ್ದಾರೆ.
ಪೊನ್ನಣ್ಣ ಡೀಸೆಂಟ್ ಆಗಿದ್ರೆ ಇಂತ ನಾಯಿಗಳನ್ನು ಸಾಕುತ್ತಿರಲಿಲ್ಲ. ಕಾವೇರಿ ತಾಯಿ ಇಗ್ಗುತಪ್ಪ ಮನಸ್ಸಿನಲ್ಲಿಟ್ಟು ಹೇಳಿ ನಿಮಗೆ ವಿನಯ್ ಸೋಮಯ್ಯ ಗೊತ್ತಿಲ್ವಾ..? ಎಂದು ಪ್ರಶ್ನೆ ಮಾಡಿದರು.
ಇನ್ನು ಕಾಸು ಕೊಟ್ಟು ಕಾಕಾಗಳನ್ನು ಕರೆಸಿ ನನ್ನ ಪ್ರತಿಕೃತಿ ದಹನ ಮಾಡಿಸಿದ್ರಿ. ಸಂಭಾವಿತರಂತೆ ಪೋಸ್ ಕೊಡಬೇಡಿ ಪೊನ್ನಣ್ಣ, ನಿಮ್ ಬಗ್ಗೆ ನಂಗೆ ಗೊತ್ತು. ನಿಮ್ಮ ಕುಟುಂಬದ ಹಿನ್ನೆಲೆ ಸ್ವಲ್ಪ ತೆಗೆದು ನೋಡಿ ಪೊನ್ನಣ್ಣ. ಕಾವೇರಿ ತೀರ್ಥೋದ್ಭವ ಆಗಲ್ಲ ಅಂದಿದ್ದು ನಿಮ್ಮ ಅಪ್ಪ, ಅದು ನಿಮ್ಮ ಸಂಸ್ಕೃತಿ. ಜಾತಿ ತಂದು ಒಡೆಯಬೇಡಿ, ಕೊಡಗಿನ ಜನ ಒಗ್ಗಟ್ಟಿನಲ್ಲಿ ಇದ್ದಾರೆ.
ಕುಟ್ಟಪ್ಪ ಅವರು ತೀರಿಹೋದಾಗ ಕೋವಿ ಎತ್ತಿದವರು ಯಾರು ಅಂತ ಗೊತ್ತು. ಸಾವಿಗೆ ಕಾರಣರಾದವರು ನೀವೆ, ನಗೆ ಸಾವಿನ ಮೇಲೆ ರಾಜಕಾರಣ ಅಂತೀರ. ಮೊನ್ನೆ ಪ್ರತಿಭಟನೆ ಮಾಡಿ ಸಾವನ್ನು ಸಂಭ್ರಮಿಸಿದವರು ನೀವು ಪೊನ್ನಣ್ಣ. ನಿಮ್ಮ ಕುಟುಂಬದಲ್ಲೇ ಹೀಗೆ ಆಗಿದ್ರೆ ಏನ್ ಮಾಡುತ್ತಿದ್ರಿ. ನಿಮ್ಮ ಹೆಸರು ಬರೆದಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದು ವಿನಯ್. ಸಹಾಯ ಮಾಡ್ತೀನಿ ಅಂತ ಗೊತ್ತು, ನೀವು ಫಿಕ್ಸರ್ ಅಂತ ನಮಗೆ ಗೊತ್ತು. ಪೊನ್ನಣ್ಣನ ಮನೆಯಲ್ಲಿ ತೆನ್ನಿರ ಮೈನಾ ಅಡಗಿ ಕುಳಿತಿರಬಹುದು. ಪೊನ್ನಣ್ಣನ ಮನೆಗೆ ಹೋಗಿ ಮೊದಲು ಪೊಲೀಸರು ಸರ್ಚ್ ಮಾಡಬೇಕು. ಪೊನ್ನಣ್ಣ ನ್ಯಾಯಾಲಯದ ಮೇಲೂ ಪ್ರಭಾವ ಬೀರಬಹುದು. ಪೊನ್ನಣ್ಣ ಪೊಲೀಸರ ಮೇಲೆ ಒತ್ತಡ ತಂದು ಪ್ರಕರಣ ಮುಗಿಸಲು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಇನ್ನು ಪ್ರತಾಪ್ ಸಿಂಹ ಬಂದರೆ ಅಟ್ಟಾಡಿಸಿ ಹೊಡೆಯಲು ಕರೆ ಕೊಡುವ ಕಾಂಗ್ರೆಸ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾಳೆ ಪೊನ್ನಣ್ಣನ ಮನೆಗೆ ಬರಬೇಕಾ…? ತಾಕತ್ತಿದೆಯಾ..? ಎಲ್ಲಿಗೆ ಬರಬೇಕು ಹೇಳಿ ನಾನು ಬರುತ್ತೇನೆ ಎಂದು ಸವಾಲು ಹಾಕಿದರು. ಕೇರಳದ ಮಲಯಾಳಿಗಳನ್ನ ಪಕ್ಕದಲ್ಲಿ ಇಟ್ಕೊಂಡು ಪ್ರೊಟೆಕ್ಷನ್ ತೆಗೆದುಕೊಳ್ತೀರುವುದು ನೀವು.
ಯಾರು ಯಾರಿಗೋ ಹೆದರಿಲ್ಲ ನಿಮಗೆ ಹೆದರುತ್ತೀನಾ..? ಕೊಡಗಿನಲ್ಲಿ ಶಾಂತಿ ಕದಡಿರೋರು ನೀವು ಪೊನ್ನಣ್ಣ. ವಿನಯ್ ಸೋಮಯ್ಯ ಪ್ರಧಾನಿ ಮೋದಿ ಅವರ ಅಭಿಮಾನಿ. ವಿನಯ್ ಬಿಜೆಪಿಗ ಅಂತಲೇ ಅವನ ವಿರುದ್ಧ ಎಫ್ಐಆರ್ ಹಾಕಿಸಿದ್ದಾರೆ ಎಂದು ಕಿಡಿಕಾರಿದರು.
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…
ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…
ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್ ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್…
ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…