ಕೊಡಗು

ಕೊಡಗಿನಲ್ಲಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

ಮಡಿಕೇರಿ : ಒಂಟಿ ಮನೆಯೊಂದರಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ಬೇಗೂರು ಗ್ರಾಮದ ಸಮೀಪ ಶುಕ್ರವಾರ ನಡೆದಿದೆ.

ಗೌರಿ, ಕಾಳ, ನಾಗಿ ಹಾಗೂ ಕಾವೇರಿ ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಹತ್ಯಾಕಾಂಡದಿಂದ ಇಡೀ ಜಿಲ್ಲೆ ಬೆಚ್ಚಿ ಬಿದ್ದಿದೆ.

ಗೌರಿ, ಕಾಳ ಎಂಬುವವರ ಮಗಳಾದ ನಾಗಿ, ಪತಿ ಗಿರೀಶ ಎಂಬುವವನೊಂದಿಗೆ ವಾಶವಿದ್ದರು. ಪುತ್ರಿ ಕಾವೇರಿ ಸಹ ಇದ್ದರು. ಕೊಲೆ ಆರೋಪಿ ಗಿರೀಶ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ಗಿರೀಶ್ ಪತ್ತೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಗನ ಚಿತ್ರಕ್ಕೆ ಅಮ್ಮನೇ ನಿರ್ಮಾಪಕಿ, ಅಪ್ಪನೇ ಕಥೆಗಾರ …

ಕನ್ನಡ ಚಿತ್ರರಂಗದಲ್ಲಿ ಹಲವರಿಗೆ ಸೂಕ್ತ ಅವಕಾಶ ಸಿಗದೆ, ಅವರ ಕುಟುಂಬದವರೇ ಚಿತ್ರ ನಿರ್ಮಾಣ ಮಾಡಿದ ಹಲವು ಉದಾಹರಣೆಗಳಿವೆ. ಈ ಸಾಲಿಗೆ…

7 mins ago

ಕೊಡಗು ಜಿಲ್ಲೆಯ ಹಲವೆಡೆ ಮುಂದುವರಿದ ವರುಣನ ಆರ್ಭಟ

ಕೊಡಗು: ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದ್ದಾನೆ. ಇಂದು ಮಧ್ಯಾಹ್ನದಿಂದಲೂ ಜಿಲ್ಲೆಯ ಹಲವೆಡೆ…

21 mins ago

ಮಂಡ್ಯ| ಸಿ.ಇ.ಟಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಕ್ರಮ ಕೈಗೊಳ್ಳಿ: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಏಪ್ರಿಲ್ 16 ಮತ್ತು 17ರಂದು ನಡೆಯುವ ಸಿ.ಇ.ಟಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ…

36 mins ago

ಹಾಸನ| 112 ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ: ಸವಾರ ಸಾವು

ಹಾಸನ: 112 ಪೊಲೀಸ್‌ ವಾಹನ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಹಾಸನ…

43 mins ago

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಇಡೀ ದೇಶದಲ್ಲಿ ಭ್ರಷ್ಟಾಚಾದಲ್ಲಿ ಪ್ರಥಮ ಸ್ಥಾನ ಪಡೆದು ತಮ್ಮ ಸರ್ಕಾರದ ಲಂಚವತಾರ ಬಟಾ ಬಯಲು…

1 hour ago

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಸುಪೀಂ ಕೋರ್ಟ್‌, ತಮಿಳುನಾಡಿನ ರಾಜ್ಯಪಾಲ ಆರ್.ಎನ್‌.ರವಿ ಅವರನ್ನು ತರಾಟೆಗೆ ತೆಗೆದುಕೊಂಡು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ…

2 hours ago