Fraud in the guise of cyber police: Five people including a woman arrested
ಮಡಿಕೇರಿ : ಸೈಬರ್ ಪೊಲೀಸರ ಹೆಸರಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ, ಲಕ್ಷಾಂತರ ರೂ. ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕ, ಮಹಿಳೆ ಸಹಿತ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಹಾಲೇರಿ ನಿವಾಸಿ ಇಬ್ರಾಹಿಂ ಬಾದ್ ಷಾ(25), ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಬಳಿಘಟ್ಟ ಗ್ರಾಮದ ಬಿ.ಎಂ.ರಾಘವೇಂದ್ರ (19) , ಇಬ್ರಾಹಿಂ ಬಾದ್ಷಾನ ಪತ್ನಿ, ಬೆಂಗಳೂರಿನ ಬನಶಂಕರಿ ನಿವಾಸಿ ಸಂಗೀತಾ(30), ಕುಶಾಲನಗರದ ಆದರ್ಶ ದ್ರಾವಿಡ ಕಾಲೋನಿಯ ಸಿ.ಕೆ.ಚರಣ್ (19) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಓರ್ವ ಬಾಲಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಏನಿದು ಘಟನೆ?:
ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ಗ್ರಾಮದ ನಿವಾಸಿ ಪರಶಿವಮೂರ್ತಿ ಎಂಬವರು ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಬಕ್ನಲ್ಲಿ ಒಬ್ಬರಿಗೆ ಮೆಸೇಜ್ ಅಥವಾ ಕಮೆಂಟ್ ಮಾಡಿದ್ದರೆನ್ನಲಾಗಿದೆ. ಇದಕ್ಕೆ ಸಂಬಂಧಿಸಿಂತೆ ಅಪರಿಚಿತ ವ್ಯಕ್ತಿಯು ನ.2ರಂದು ಪರಶಿವಮೂರ್ತಿಯವರ ಮೊಬೈಲ್ ಸಂಖ್ಯೆಗೆ ಕರೆಮಾಡಿ ತಾನು ಪಿರಿಯಾಪಟ್ಟಣ ಸೈಬರ್ ಪೊಲೀಸ್ ಎಂದು ಪರಿಚಯಿಸಿಕೊಂಡಿದ್ದಾರೆ.
ಅಲ್ಲದೆ, ನೀವು ಹುಡುಗಿಯರಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್, ಕಮೆಂಟ್ ಮಾಡಿ ಟಾರ್ಚರ್ ನೀಡಿರುವ ಕುರಿತು ದೂರು ದಾಖಲಾಗಿದೆ. ನೀವು ಹಣ ನೀಡಿದರೆ ಸರಿ ಮಾಡುತ್ತೇನೆ. ಇಲ್ಲವಾದಲ್ಲಿ ಮನೆಯ ಬಳಿ ಬಂದು ಕರೆದುಕೊಂಡು ಹೋಗಿ ಜೈಲಿಗೆ ಹಾಕುತ್ತೇನೆ ಹಾಗೂ ಅಕ್ಕ-ಪಕ್ಕದವರ ಮನೆಯ ಮುಂದೆ ಮಾನ ಮರ್ಯಾದೆ ಹೋಗುವಂತೆ ಮಾಡುತ್ತೇನೆ ಎಂದು ಹಲವು ಬಾರಿ ಹೆದರಿಸಿ ಸುಮಾರು 7 ಲಕ್ಷ ರೂ.ಗಳನ್ನು ಪಡೆದಿರುವುದಾಗಿ ತಿಳಿದುಬಂದಿದೆ.
ಈ ಸಂಬಂಧವಾಗಿ ಜ.11ರಂದು ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪರಶಿವಮೂರ್ತಿ ನೀಡಿದ ದೂರಿನ ಅನ್ವಯ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ: 318(2), 319(1), 308(2) ಬಿಎನ್ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ತನಿಖೆ ಹಾಗೂ ಆರೋಪಿಗಳ ಪತ್ತೆಗಾಗಿ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಪಿ.ಚಂದ್ರಶೇಖರ್, ಕುಶಾಲನಗರ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ. ಪ್ರಕಾಶ್, ಪಿಎಸ್ಐ ಗೀತಾ ಹಾಗೂ ಠಾಣಾ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು.
ಈ ತಂಡವು ಮಾಹಿತಿ ಸಂಗ್ರಹಿಸಿ ಐವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧಿಕ್ಷಕ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…