ಕುಶಾಲನಗರ : ಪುರಸಭೆ ವ್ಯಾಪ್ತಿಯ ಗಂಧದಕೋಟೆ ಗ್ರಾಮದ ಬಡಾವಣೆಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
ಈ ಬಡಾವಣೆಯು ಎರಡು ದಶಕದಿಂದ ಮೂಲಸೌಕರ್ಯಗಳಾದ ರಸ್ತೆ, ಒಳಚರಂಡಿ ಹಾಗೂ ಬೀದಿದೀಪಗಳಿಂದ ವಂಚಿತವಾಗಿದೆ. ಮೈಸೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ಇರುವ ಬಡಾವಣೆ ಹೋಗಲು ಸೂಕ್ತ ರಸ್ತೆ ವ್ಯವಸ್ಥೆ ಇಲ್ಲ. ಈಗಿರುವ ರಸ್ತೆ ತುಂಬ ಕಿರಿದಾಗಿದ್ದು, ವಾಹನ ಓಡಾಡಲು ಸಾಧ್ಯವಿಲ್ಲ ಪರಿಸ್ಥಿತಿ ಇದೆ. ಇಲ್ಲಿನ ನಿವಾಸಿಗಳಿಗೆ ಆರೋಗ್ಯ ಸಮಸ್ಯೆ ಉಂಟಾದರೆ ಅವರನ್ನು ಆಸ್ಪತ್ರೆಗೆ ಸಾಗಿಸಲು ತುಂಬ ಕಷ್ಟಪಡಬೇಕಾಗಿದೆ.
ಅಲ್ಲದೇ ಮನೆಗೆ ಯಾವುದೇ ವಸ್ತುಗಳನ್ನು ವಾಹನಗಳಲ್ಲಿ ಸಾಗಾಟ ಮಾಡಲು ಆಗದಂತ ಸ್ಥಿತಿ ಇದೆ. ರಸ್ತೆ ಜಾಗವನ್ನು ಒತ್ತುವರಿ ಮಾಡಿಕೊಂಡು ವ್ಯಕ್ತಿಯೊಬ್ಬರು ತಮ್ಮ ಜಾಗಕ್ಕೆ ಕಾಂಪೌಂಡ್ ನಿರ್ಮಿಸಿಕೊಂಡಿದ್ದಾರೆ ಎಂದು ನಿವಾಸಿ ಎನ್.ರವೀಂದ್ರ ಹಾಗೂ ಪುಷ್ಪಾ ದೂರಿದ್ದಾರೆ. ಇಲ್ಲಿನ ಸಮಸ್ಯೆಗಳಿಂದ ನಿತ್ಯನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು ತಮ್ಮ ಬಡಾವಣೆಗೆ ಹೋಗುವ ರಸ್ತೆಯಲ್ಲಿ ಚುನಾವಣೆಯನ್ನು ಬಹಿಷ್ಕರಿಸಲಾಗಿದ್ದು, ಯಾವುದೇ ಪಕ್ಷಗಳ ನಾಯಕರು ನಮ್ಮ ಬಡಾವಣೆಗೆ ಬರಬಾರದು ಎಂದು ಬ್ಯಾನರ್ ಅಳವಡಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಬಡಾವಣೆಯ ನಿವಾಸಿಗಳಾದ ಚಂದ್ರೇಶ್, ನಾಗಮ್ಮ, ಲಕ್ಷ್ಮಿ, ಎಸ್.ಮಣಿ ಸೇರಿದಂತೆ 25 ಮಂದಿ ಸಹಿ ಮಾಡಿರುವ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವ ಮೂಲಕ ತಮ್ಮ ನೋವು ತೊಡಗಿಕೊಂಡಿದ್ದಾರೆ.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್ಗೆ…