ಕೊಡಗು

ಚುನಾವಣೆ ಬಹಿಷ್ಕಾರಕ್ಕೆ ಗಂಧದಕೋಟೆ ಗ್ರಾಮಸ್ಥರ ನಿರ್ಧಾರ

ಕುಶಾಲನಗರ : ಪುರಸಭೆ ವ್ಯಾಪ್ತಿಯ ಗಂಧದಕೋಟೆ ಗ್ರಾಮದ ಬಡಾವಣೆಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
ಈ ಬಡಾವಣೆಯು ಎರಡು ದಶಕದಿಂದ ಮೂಲಸೌಕರ್ಯಗಳಾದ ರಸ್ತೆ, ಒಳಚರಂಡಿ ಹಾಗೂ ಬೀದಿದೀಪಗಳಿಂದ ವಂಚಿತವಾಗಿದೆ. ಮೈಸೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ಇರುವ ಬಡಾವಣೆ ಹೋಗಲು ಸೂಕ್ತ ರಸ್ತೆ ವ್ಯವಸ್ಥೆ ಇಲ್ಲ. ಈಗಿರುವ ರಸ್ತೆ ತುಂಬ ಕಿರಿದಾಗಿದ್ದು, ವಾಹನ ಓಡಾಡಲು ಸಾಧ್ಯವಿಲ್ಲ ಪರಿಸ್ಥಿತಿ ಇದೆ. ಇಲ್ಲಿನ‌ ನಿವಾಸಿಗಳಿಗೆ ಆರೋಗ್ಯ ಸಮಸ್ಯೆ ಉಂಟಾದರೆ ಅವರನ್ನು ಆಸ್ಪತ್ರೆಗೆ ಸಾಗಿಸಲು ತುಂಬ ಕಷ್ಟಪಡಬೇಕಾಗಿದೆ.

ಅಲ್ಲದೇ ಮನೆಗೆ ಯಾವುದೇ ವಸ್ತುಗಳನ್ನು ವಾಹನಗಳಲ್ಲಿ ಸಾಗಾಟ ಮಾಡಲು ಆಗದಂತ ಸ್ಥಿತಿ ಇದೆ. ರಸ್ತೆ ಜಾಗವನ್ನು ಒತ್ತುವರಿ ಮಾಡಿಕೊಂಡು ವ್ಯಕ್ತಿಯೊಬ್ಬರು ತಮ್ಮ ಜಾಗಕ್ಕೆ ಕಾಂಪೌಂಡ್ ನಿರ್ಮಿಸಿಕೊಂಡಿದ್ದಾರೆ ಎಂದು ನಿವಾಸಿ ಎನ್.ರವೀಂದ್ರ ಹಾಗೂ ಪುಷ್ಪಾ ದೂರಿದ್ದಾರೆ. ಇಲ್ಲಿನ ಸಮಸ್ಯೆಗಳಿಂದ ನಿತ್ಯನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು ತಮ್ಮ ಬಡಾವಣೆಗೆ ಹೋಗುವ ರಸ್ತೆಯಲ್ಲಿ ಚುನಾವಣೆಯನ್ನು ಬಹಿಷ್ಕರಿಸಲಾಗಿದ್ದು, ಯಾವುದೇ ಪಕ್ಷಗಳ ನಾಯಕರು ನಮ್ಮ ಬಡಾವಣೆಗೆ ಬರಬಾರದು ಎಂದು ಬ್ಯಾನರ್ ಅಳವಡಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಬಡಾವಣೆಯ ನಿವಾಸಿಗಳಾದ ಚಂದ್ರೇಶ್, ನಾಗಮ್ಮ, ಲಕ್ಷ್ಮಿ, ಎಸ್.ಮಣಿ ಸೇರಿದಂತೆ 25 ಮಂದಿ ಸಹಿ ಮಾಡಿರುವ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವ ಮೂಲಕ ತಮ್ಮ ನೋವು ತೊಡಗಿಕೊಂಡಿದ್ದಾರೆ.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago