ಕೊಡಗು

ಕೊಡಗು: ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ

ಮಡಿಕೇರಿ: ಮಾರಾಟ ಮಾಡಲು ಗಾಂಜಾ ದಾಸ್ತಾನು ಇರಿಸಿದ್ದ ವ್ಯಕ್ತಿಯನ್ನು ಗೋಣಿಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗೋಣಿಕೊಪ್ಪದ ಕಾವೇರಿ ಹಿಲ್ಸ್‌ನ ನಿವಾಸಿ ಅಬ್ದುಲ್ ಸಾಹಿಲ್ (22) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿ 600 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಮೊಬೈಲ್, ಒಂದು ಟ್ಯಾಬ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿರಾಜಪೇಟೆ ಉಪವಿಭಾಗ ಡಿಎಸ್‌ಪಿ ಆರ್. ಮೋಹನ್‌ಕುಮಾರ್, ಸಿಪಿಐ ಶಿವರಾಜ ಮುಧೋಳ್, ಗೋಣಿಕೊಪ್ಪ ವೃತ್ತ ನಿರೀಕ್ಷಕ ರೂಪದೇವಿ ಬಿರಾದರ್, ಪಿಎಸ್‌ಐ ಕಾವೇರಪ್ಪ ಟಿ.ಎಂ. ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದರು. ಈ ವೇಳೆ ಮಾಲು ಸಮೇತ ಆರೋಪಿ ಬಂಧಿಸಿ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

1 hour ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

1 hour ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

1 hour ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

2 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

2 hours ago