ಗೋಣಿಕೊಪ್ಪ: ಕೆರೆ ಬಳಿ ಆಟವಾಡುತ್ತಿದ್ದ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಅತ್ತೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆನ್ನಂಗೋಲ್ಲಿ ಸಮೀಪದ ಕೆ.ಕೆ.ತಿಮ್ಮಯ್ಯ ಅವರ ಕೆರೆಯಲ್ಲಿ ಈ ದುರ್ಘಟನೆ ನಡೆದುಹೋಗಿದೆ. ಲಾವಣ್ಯ ಎಂಬುವವಳೇ ಮೃತಪಟ್ಟ ದುರ್ದೈವಿಯಾಗಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಇಂದು ಕೆರೆಯ ದಡದಲ್ಲಿ ಆರು ವಿದ್ಯಾರ್ಥಿಗಳು ಆಟವಾಡುತ್ತಿದ್ದರು. ಲಾವಣ್ಯ, ಉಷಾ ಹಾಗೂ ಶೋಭಿತಾ ಆಟವಾಡುವ ಉತ್ಸಾಹದಲ್ಲಿ ಕೆರೆಗೆ ಹಾರಿದ್ದಾರೆ. ತೋಟಕ್ಕೆ ನೀರು ಹಾಯಿಸಿದ್ದರಿಂದ ಕೆರೆಯಲ್ಲಿ ನೀರು ಬತ್ತಿ ಹೋಗಿ ಕೆಸರಿನಿಂದ ತುಂಬಿತ್ತು. ಈ ಮೂವರು ಮಕ್ಕಳು ಕೆಸರಿನಲ್ಲಿ ಸಿಲುಕಿಕೊಂಡು ಕಿರುಚಾಡಿದ್ದಾರೆ.
ದಡದ ಮೇಲಿದ್ದ ಮೂರು ಮಕ್ಕಳು ಸಮೀಪದ ಪೋಷಕರಿಗೆ ಮಾಹಿತಿ ಮುಟ್ಟಿಸಲು ಹೋದಾಗ, ಈ ಮಾರ್ಗದ ಮೂಲಕ ಹಾದು ಹೋಗುತ್ತಿದ್ದ ಕಾರ್ಮಿಕರು ಮಕ್ಕಳನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಕೆಸರಿನಲ್ಲಿ ಸಿಲುಕಿದ ಇಬ್ಬರು ಮಕ್ಕಳನ್ನ ರಕ್ಷಿಸಲಾಗಿದ್ದು, ಈ ವೇಳೆಗಾಗಲೇ ಲಾವಣ್ಯಳ ಪ್ರಾಣ ಪಕ್ಷಿ ಹಾರಿಹೋಗಿದೆ. ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…