ಗೋಣಿಕೊಪ್ಪ: ಕೆರೆ ಬಳಿ ಆಟವಾಡುತ್ತಿದ್ದ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಅತ್ತೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆನ್ನಂಗೋಲ್ಲಿ ಸಮೀಪದ ಕೆ.ಕೆ.ತಿಮ್ಮಯ್ಯ ಅವರ ಕೆರೆಯಲ್ಲಿ ಈ ದುರ್ಘಟನೆ ನಡೆದುಹೋಗಿದೆ. ಲಾವಣ್ಯ ಎಂಬುವವಳೇ ಮೃತಪಟ್ಟ ದುರ್ದೈವಿಯಾಗಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಇಂದು ಕೆರೆಯ ದಡದಲ್ಲಿ ಆರು ವಿದ್ಯಾರ್ಥಿಗಳು ಆಟವಾಡುತ್ತಿದ್ದರು. ಲಾವಣ್ಯ, ಉಷಾ ಹಾಗೂ ಶೋಭಿತಾ ಆಟವಾಡುವ ಉತ್ಸಾಹದಲ್ಲಿ ಕೆರೆಗೆ ಹಾರಿದ್ದಾರೆ. ತೋಟಕ್ಕೆ ನೀರು ಹಾಯಿಸಿದ್ದರಿಂದ ಕೆರೆಯಲ್ಲಿ ನೀರು ಬತ್ತಿ ಹೋಗಿ ಕೆಸರಿನಿಂದ ತುಂಬಿತ್ತು. ಈ ಮೂವರು ಮಕ್ಕಳು ಕೆಸರಿನಲ್ಲಿ ಸಿಲುಕಿಕೊಂಡು ಕಿರುಚಾಡಿದ್ದಾರೆ.
ದಡದ ಮೇಲಿದ್ದ ಮೂರು ಮಕ್ಕಳು ಸಮೀಪದ ಪೋಷಕರಿಗೆ ಮಾಹಿತಿ ಮುಟ್ಟಿಸಲು ಹೋದಾಗ, ಈ ಮಾರ್ಗದ ಮೂಲಕ ಹಾದು ಹೋಗುತ್ತಿದ್ದ ಕಾರ್ಮಿಕರು ಮಕ್ಕಳನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಕೆಸರಿನಲ್ಲಿ ಸಿಲುಕಿದ ಇಬ್ಬರು ಮಕ್ಕಳನ್ನ ರಕ್ಷಿಸಲಾಗಿದ್ದು, ಈ ವೇಳೆಗಾಗಲೇ ಲಾವಣ್ಯಳ ಪ್ರಾಣ ಪಕ್ಷಿ ಹಾರಿಹೋಗಿದೆ. ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…
ಚಾಮರಾಜನಗರ: ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ. ಕಳೆದ 16 ವರ್ಷಗಳಲ್ಲಿ ಬರೋಬ್ಬರಿ 3,289 ವನ್ಯಜೀವಿ ಅಪರಾಧ ಪ್ರಕರಣಗಳು…
ಎಚ್.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸಫಾರಿಗೆ ತೆರಳಿದ್ದ ಪ್ರವಾಸಿಗರ ವಾಹನ ಅಪಘಾತಕ್ಕೀಡಾಗಿ, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಫಾರಿಯಲ್ಲಿ ಹುಲಿ ಕಾಣಿಸಿಕೊಂಡಿರುವ…