Glass Bridge Project at Raja Seat: Aam Aadmi Party Strongly Opposes
ಮಡಿಕೇರಿ: ಹೆಸರುವಾಸಿ ಪ್ರವಾಸಿತಾಣ ಮಡಿಕೇರಿ ನಗರದ ರಾಜಾಸೀಟು ಉದ್ಯಾನವನದಲ್ಲಿ ಗಾಜಿನ ಸೇತುವೆ ನಿರ್ಮಿಸುವ ಯೋಜನೆ ಪರಿಸರಕ್ಕೆ ಮತ್ತು ಜನರ ನೆಮ್ಮದಿಗೆ ಮಾರಕವಾಗಿದ್ದು, ಇದನ್ನು ತಕ್ಷಣ ಕೈಬಿಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಘಟಕ ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ, ಪ್ರಕೃತಿದತ್ತವಾದ ರಾಜಾಸೀಟು ಉದ್ಯಾನವನವನ್ನು ಈಗಾಗಲೇ ಕಾಂಕ್ರಿಟೀಕರಣಗೊಳಿಸಿ ನೈಜತೆಗೆ ದಕ್ಕೆ ತರಲಾಗಿದೆ. ಇದೀಗ ಗಾಜಿನ ಸೇತುವೆ ನಿರ್ಮಿಸುವ ಕುರಿತು ಯೋಜನೆ ರೂಪಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇದನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದ್ದಾರೆ.
ಯೋಜನೆಯ ಕುರಿತು ಯಾರ ಗಮನಕ್ಕೂ ತಾರದೆ ಮತ್ತು ಜನಾಭಿಪ್ರಾಯ ಸಂಗ್ರಹಿಸದೆ ಏಕಾಏಕಿ ಗಾಜಿನ ಸೇತುವೆ ನಿರ್ಮಿಸಲು ಮುಂದಾಗಿರುವುದು ನಿಯಮಬಾಹಿರ ಕ್ರಮವಾಗಿದೆ. ಗಾಜಿನ ಸೇತುವೆ ಪ್ರಕೃತಿ ಸೌಂದರ್ಯದ ರಾಜಾಸೀಟು ಉದ್ಯಾನವನಕ್ಕೆ ಮಾರಕವಾಗಿದೆ. ಪ್ರಸ್ತುತ ಸಾವಿರಾರು ಪ್ರವಾಸಿಗರಿಂದ ತುಂಬಿ ಹೋಗುತ್ತಿರುವ ರಾಜಾಸೀಟು ವ್ಯಾಪ್ತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಜನರು ಪರದಾಡುವ ಪರಿಸ್ಥಿತಿ ಇದೆ.
ಗಾಜಿನ ಸೇತುವೆಯಂತಹ ಪ್ರಕೃತಿಗೆ ವಿರುದ್ಧವಾದ ಯೋಜನೆ ಅನುಷ್ಠಾನಗೊಂಡರೆ ಪ್ರವಾಸಿಗರ ಸಂಖ್ಯೆ ದ್ವಿಗುಣವಾಗುವ ಸಾಧ್ಯತೆಗಳಿದೆ. ಇದರಿಂದ ಸುತ್ತಮುತ್ತಲ ಪರಿಸರ ಮಾಲಿನ್ಯವಾಗುವುದಲ್ಲದೆ ಅಪಾಯಕ್ಕೂ ಆಹ್ವಾನ ನೀಡಿದಂತ್ತಾಗುತ್ತದೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ಕಾಮಗಾರಿಗಳೆಲ್ಲವೂ ಕಳಪೆ ಗುಣಮಟ್ಟದಿಂದ ಕೂಡಿದ್ದು, ಮುಂದೆ ಈ ಗಾಜಿನ ಸೇತುವೆ ಕೂಡ ಕಳಪೆಯಾದರೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಅಪಾಯ ತಪ್ಪಿದ್ದಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪರಿಸರಸ್ನೇಹಿ ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾಗಿ ರಾಜಾಸೀಟು ಉದ್ಯಾನವನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಒತ್ತಾಯಿಸಿರುವ ಹೆಚ್.ಬಿ.ಪೃಥ್ವಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಅಭಿವೃದ್ಧಿಯ ಬಗ್ಗೆ ಅಷ್ಟು ಕಾಳಜಿ ಇದ್ದರೆ ನಗರದಲ್ಲಿ ಸುಸಜ್ಜಿತ ವಾಹನ ಪಾರ್ಕಿಂಗ್ ಸಂಕೀರ್ಣವನ್ನು ನಿರ್ಮಿಸಲಿ ಎಂದು ಒತ್ತಾಯಿಸಿದ್ದಾರೆ.
ಒಂದು ವೇಳೆ ಜನರ ವಿರೋಧದ ನಡುವೆಯೂ ರಾಜಾಸೀಟ್ ನಲ್ಲಿ ಗಾಜಿನ ಸೇತುವೆ ನಿರ್ಮಾಣಕ್ಕೆ ಮುಂದಾದರೆ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಆಮ್ ಆದ್ಮಿ ಪಾರ್ಟಿ ತೀವ್ರ ಪ್ರತಿಭಟನೆಯನ್ನು ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…