ಕೊಡಗು

ಮಡಿಕೇರಿ ದಸರೆಗೆ ಅದ್ದೂರಿ ತೆರೆ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಕ್ಕೆ ಅದ್ಧೂರಿ ತೆರೆಬಿದ್ದಿದ್ದು, ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಈ ಬಾರಿ ಶ್ರೀ ಕೋಟೆ ಮಹಾಗಣಪತಿ ಹಾಗೂ ಕೋಟೆ ಶ್ರೀ ಮಾರಿಯಮ್ಮ ದೇವಾಲಯಗಳ ಮಂಟಪಗಳು ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಮಂಟಪಕ್ಕೆ ದ್ವಿತೀಯ ಹಾಗೂ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಮಂಟಪಕ್ಕೆ ತೃತೀಯ ಬಹುಮಾನ ದೊರಕಿದೆ.

ಗುರುವಾರ ರಾತ್ರಿ ೯ ಗಂಟೆಯಿಂದಲೇ ದಶಮಂಟಪಗಳ ಪ್ರದರ್ಶನಗಳು ಆರಂಭಗೊಂಡವು. ಪೇಟೆ ಶ್ರೀ ರಾಮ ಮಂದಿರ ದೇವಾಲಯ ಮಂಟಪ ಪ್ರಥಮ ಪ್ರದರ್ಶನ ನೀಡುತ್ತಿದ್ದಂತೆ ಉಳಿದ ಮಂಟಪಗಳು ಕೂಡ ದಶಮಂಟಪ ಸಮಿತಿ ನಿಗದಿಪಡಿಸಿದ್ದ ಸ್ಥಳಕ್ಕೆ ಆಗಮಿಸಿ ಪ್ರದರ್ಶನ ನೀಡಲು ಆರಂಭಿಸಿದವು. ಚಲನವಲಗಳನ್ನೊಳಗೊಂಡ ವಿಭಿನ್ನ ಕಲಾಕೃತಿಗಳ ಕಥಾಹಂದವನ್ನು ಮಂಟಪಗಳಲ್ಲಿ ಪ್ರಸ್ತುತಪಡಿಸಲಾಯಿತು. ನೂಕು ನುಗ್ಗಲಿನ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಜನರು ಪ್ರದರ್ಶನವನ್ನು ಕಣ್ತುಂಬಿಕೊಂಡರು.

ಇದನ್ನು ಓದಿ : ಮೈಸೂರು ದಸರಾ: ಆರನೇ ಬಾರಿ ಅಂಬಾರಿ ಹೊತ್ತು ಸಾಗುತ್ತಿರುವ ಅಭಿಮನ್ಯು

ವಿಘ್ನರಾಜನಿಂದ ಮಮತಾಸುರ ವಧೆ ಎಂಬ ಪೌರಾಣಿಕ ಕಥಾ ಸಾರಂಶವನ್ನು ಮಂಟಪದಲ್ಲಿ ಅಳವಡಿಸಿ ಪ್ರದರ್ಶನ ನೀಡಿದ ಶ್ರೀ ಕೋಟೆ ಮಹಾಗಣಪತಿ ದೇವಾಲಯ ಹಾಗೂ ಉಗ್ರನರಸಿಂಹನ ಉಗ್ರತ್ವ ಶಮನ ಎಂಬ ಕಥಾ ಹಂದರವನ್ನು ಮಂಟಪದಲ್ಲಿ ಅಳವಡಿಸಿ ಪ್ರದರ್ಶನ ನೀಡಿದ ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳು ಜಂಟಿಯಾಗಿ ಪ್ರಥಮ ಬಹುಮಾನ ಪಡೆದವು. ಪರಶುರಾಮನ ಕಥೆ ಪ್ರದರ್ಶಿಸಿದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ದ್ವಿತೀಯ ಬಹುಮಾನ ಪಡೆದರೆ, ಅಂಧಕಾಸುರನ ಸಂಹಾರ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಿದ್ದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ತೃತೀಯ ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು.

ರಾತ್ರಿಯಾಗುತ್ತಿದ್ದಂತೆ ಹೊರಜಿಲ್ಲೆ, ಹೊರ ರಾಜ್ಯದಿಂದ ಜನರು ನಗರದಲ್ಲಿ ಜಮಾವಣೆಗೊಂಡರು. ನಗರಕ್ಕೆ ವಾಹನ ಪ್ರವೇಶ ನಿರ್ಬಂಧಿಸಿದ್ದರಿಂದ ನಿಗದಿಪಡಿಸಿದ ಸ್ಥಳಗಳಲ್ಲಿ ವಾಹನ ನಿಲ್ಲಿಸಿ ನಗರದತ್ತ ಹೆಜ್ಜೆ ಹಾಕಿದರು. ಇಡೀ ರಾತ್ರಿ ನಗರದಲ್ಲಿ ನಡೆದ ದಶಮಂಟಪಗಳ ಶೋಭಾಯತ್ರೆ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಯಿತು. ದೇವಾನುದೇವತೆಗಳಿಂದ ಅಸುರರ ಸಂಹಾರದ ಕಥಾ ಹಂದರಗಳು ನೋಡುಗರಿಗೆ ದೇವಲೋಕವೇ ಧರೆಗಿಳಿದಂತೆ ಭಾಸವಾಯಿತು.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

6 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

8 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

8 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

9 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

9 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

9 hours ago