ಕೊಡಗು

ಮಡಿಕೇರಿ ದಸರೆಗೆ ಅದ್ದೂರಿ ತೆರೆ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಕ್ಕೆ ಅದ್ಧೂರಿ ತೆರೆಬಿದ್ದಿದ್ದು, ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಈ ಬಾರಿ ಶ್ರೀ ಕೋಟೆ ಮಹಾಗಣಪತಿ ಹಾಗೂ ಕೋಟೆ ಶ್ರೀ ಮಾರಿಯಮ್ಮ ದೇವಾಲಯಗಳ ಮಂಟಪಗಳು ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಮಂಟಪಕ್ಕೆ ದ್ವಿತೀಯ ಹಾಗೂ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಮಂಟಪಕ್ಕೆ ತೃತೀಯ ಬಹುಮಾನ ದೊರಕಿದೆ.

ಗುರುವಾರ ರಾತ್ರಿ ೯ ಗಂಟೆಯಿಂದಲೇ ದಶಮಂಟಪಗಳ ಪ್ರದರ್ಶನಗಳು ಆರಂಭಗೊಂಡವು. ಪೇಟೆ ಶ್ರೀ ರಾಮ ಮಂದಿರ ದೇವಾಲಯ ಮಂಟಪ ಪ್ರಥಮ ಪ್ರದರ್ಶನ ನೀಡುತ್ತಿದ್ದಂತೆ ಉಳಿದ ಮಂಟಪಗಳು ಕೂಡ ದಶಮಂಟಪ ಸಮಿತಿ ನಿಗದಿಪಡಿಸಿದ್ದ ಸ್ಥಳಕ್ಕೆ ಆಗಮಿಸಿ ಪ್ರದರ್ಶನ ನೀಡಲು ಆರಂಭಿಸಿದವು. ಚಲನವಲಗಳನ್ನೊಳಗೊಂಡ ವಿಭಿನ್ನ ಕಲಾಕೃತಿಗಳ ಕಥಾಹಂದವನ್ನು ಮಂಟಪಗಳಲ್ಲಿ ಪ್ರಸ್ತುತಪಡಿಸಲಾಯಿತು. ನೂಕು ನುಗ್ಗಲಿನ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಜನರು ಪ್ರದರ್ಶನವನ್ನು ಕಣ್ತುಂಬಿಕೊಂಡರು.

ಇದನ್ನು ಓದಿ : ಮೈಸೂರು ದಸರಾ: ಆರನೇ ಬಾರಿ ಅಂಬಾರಿ ಹೊತ್ತು ಸಾಗುತ್ತಿರುವ ಅಭಿಮನ್ಯು

ವಿಘ್ನರಾಜನಿಂದ ಮಮತಾಸುರ ವಧೆ ಎಂಬ ಪೌರಾಣಿಕ ಕಥಾ ಸಾರಂಶವನ್ನು ಮಂಟಪದಲ್ಲಿ ಅಳವಡಿಸಿ ಪ್ರದರ್ಶನ ನೀಡಿದ ಶ್ರೀ ಕೋಟೆ ಮಹಾಗಣಪತಿ ದೇವಾಲಯ ಹಾಗೂ ಉಗ್ರನರಸಿಂಹನ ಉಗ್ರತ್ವ ಶಮನ ಎಂಬ ಕಥಾ ಹಂದರವನ್ನು ಮಂಟಪದಲ್ಲಿ ಅಳವಡಿಸಿ ಪ್ರದರ್ಶನ ನೀಡಿದ ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳು ಜಂಟಿಯಾಗಿ ಪ್ರಥಮ ಬಹುಮಾನ ಪಡೆದವು. ಪರಶುರಾಮನ ಕಥೆ ಪ್ರದರ್ಶಿಸಿದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ದ್ವಿತೀಯ ಬಹುಮಾನ ಪಡೆದರೆ, ಅಂಧಕಾಸುರನ ಸಂಹಾರ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಿದ್ದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ತೃತೀಯ ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು.

ರಾತ್ರಿಯಾಗುತ್ತಿದ್ದಂತೆ ಹೊರಜಿಲ್ಲೆ, ಹೊರ ರಾಜ್ಯದಿಂದ ಜನರು ನಗರದಲ್ಲಿ ಜಮಾವಣೆಗೊಂಡರು. ನಗರಕ್ಕೆ ವಾಹನ ಪ್ರವೇಶ ನಿರ್ಬಂಧಿಸಿದ್ದರಿಂದ ನಿಗದಿಪಡಿಸಿದ ಸ್ಥಳಗಳಲ್ಲಿ ವಾಹನ ನಿಲ್ಲಿಸಿ ನಗರದತ್ತ ಹೆಜ್ಜೆ ಹಾಕಿದರು. ಇಡೀ ರಾತ್ರಿ ನಗರದಲ್ಲಿ ನಡೆದ ದಶಮಂಟಪಗಳ ಶೋಭಾಯತ್ರೆ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಯಿತು. ದೇವಾನುದೇವತೆಗಳಿಂದ ಅಸುರರ ಸಂಹಾರದ ಕಥಾ ಹಂದರಗಳು ನೋಡುಗರಿಗೆ ದೇವಲೋಕವೇ ಧರೆಗಿಳಿದಂತೆ ಭಾಸವಾಯಿತು.

ಆಂದೋಲನ ಡೆಸ್ಕ್

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

15 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

26 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

38 mins ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

44 mins ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

1 hour ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

1 hour ago