ಕೊಡಗು

ಮಡಿಕೇರಿ ದಸರೆಗೆ ಅದ್ದೂರಿ ತೆರೆ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಕ್ಕೆ ಅದ್ಧೂರಿ ತೆರೆಬಿದ್ದಿದ್ದು, ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಈ ಬಾರಿ ಶ್ರೀ ಕೋಟೆ ಮಹಾಗಣಪತಿ ಹಾಗೂ ಕೋಟೆ ಶ್ರೀ ಮಾರಿಯಮ್ಮ ದೇವಾಲಯಗಳ ಮಂಟಪಗಳು ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಮಂಟಪಕ್ಕೆ ದ್ವಿತೀಯ ಹಾಗೂ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಮಂಟಪಕ್ಕೆ ತೃತೀಯ ಬಹುಮಾನ ದೊರಕಿದೆ.

ಗುರುವಾರ ರಾತ್ರಿ ೯ ಗಂಟೆಯಿಂದಲೇ ದಶಮಂಟಪಗಳ ಪ್ರದರ್ಶನಗಳು ಆರಂಭಗೊಂಡವು. ಪೇಟೆ ಶ್ರೀ ರಾಮ ಮಂದಿರ ದೇವಾಲಯ ಮಂಟಪ ಪ್ರಥಮ ಪ್ರದರ್ಶನ ನೀಡುತ್ತಿದ್ದಂತೆ ಉಳಿದ ಮಂಟಪಗಳು ಕೂಡ ದಶಮಂಟಪ ಸಮಿತಿ ನಿಗದಿಪಡಿಸಿದ್ದ ಸ್ಥಳಕ್ಕೆ ಆಗಮಿಸಿ ಪ್ರದರ್ಶನ ನೀಡಲು ಆರಂಭಿಸಿದವು. ಚಲನವಲಗಳನ್ನೊಳಗೊಂಡ ವಿಭಿನ್ನ ಕಲಾಕೃತಿಗಳ ಕಥಾಹಂದವನ್ನು ಮಂಟಪಗಳಲ್ಲಿ ಪ್ರಸ್ತುತಪಡಿಸಲಾಯಿತು. ನೂಕು ನುಗ್ಗಲಿನ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಜನರು ಪ್ರದರ್ಶನವನ್ನು ಕಣ್ತುಂಬಿಕೊಂಡರು.

ಇದನ್ನು ಓದಿ : ಮೈಸೂರು ದಸರಾ: ಆರನೇ ಬಾರಿ ಅಂಬಾರಿ ಹೊತ್ತು ಸಾಗುತ್ತಿರುವ ಅಭಿಮನ್ಯು

ವಿಘ್ನರಾಜನಿಂದ ಮಮತಾಸುರ ವಧೆ ಎಂಬ ಪೌರಾಣಿಕ ಕಥಾ ಸಾರಂಶವನ್ನು ಮಂಟಪದಲ್ಲಿ ಅಳವಡಿಸಿ ಪ್ರದರ್ಶನ ನೀಡಿದ ಶ್ರೀ ಕೋಟೆ ಮಹಾಗಣಪತಿ ದೇವಾಲಯ ಹಾಗೂ ಉಗ್ರನರಸಿಂಹನ ಉಗ್ರತ್ವ ಶಮನ ಎಂಬ ಕಥಾ ಹಂದರವನ್ನು ಮಂಟಪದಲ್ಲಿ ಅಳವಡಿಸಿ ಪ್ರದರ್ಶನ ನೀಡಿದ ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳು ಜಂಟಿಯಾಗಿ ಪ್ರಥಮ ಬಹುಮಾನ ಪಡೆದವು. ಪರಶುರಾಮನ ಕಥೆ ಪ್ರದರ್ಶಿಸಿದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ದ್ವಿತೀಯ ಬಹುಮಾನ ಪಡೆದರೆ, ಅಂಧಕಾಸುರನ ಸಂಹಾರ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಿದ್ದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ತೃತೀಯ ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು.

ರಾತ್ರಿಯಾಗುತ್ತಿದ್ದಂತೆ ಹೊರಜಿಲ್ಲೆ, ಹೊರ ರಾಜ್ಯದಿಂದ ಜನರು ನಗರದಲ್ಲಿ ಜಮಾವಣೆಗೊಂಡರು. ನಗರಕ್ಕೆ ವಾಹನ ಪ್ರವೇಶ ನಿರ್ಬಂಧಿಸಿದ್ದರಿಂದ ನಿಗದಿಪಡಿಸಿದ ಸ್ಥಳಗಳಲ್ಲಿ ವಾಹನ ನಿಲ್ಲಿಸಿ ನಗರದತ್ತ ಹೆಜ್ಜೆ ಹಾಕಿದರು. ಇಡೀ ರಾತ್ರಿ ನಗರದಲ್ಲಿ ನಡೆದ ದಶಮಂಟಪಗಳ ಶೋಭಾಯತ್ರೆ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಯಿತು. ದೇವಾನುದೇವತೆಗಳಿಂದ ಅಸುರರ ಸಂಹಾರದ ಕಥಾ ಹಂದರಗಳು ನೋಡುಗರಿಗೆ ದೇವಲೋಕವೇ ಧರೆಗಿಳಿದಂತೆ ಭಾಸವಾಯಿತು.

ಆಂದೋಲನ ಡೆಸ್ಕ್

Recent Posts

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

12 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

12 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

14 hours ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

14 hours ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

14 hours ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

18 hours ago