ಕೊಡಗು

ಮಡಿಕೇರಿ ದಸರೆಗೆ ಅದ್ದೂರಿ ತೆರೆ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಕ್ಕೆ ಅದ್ಧೂರಿ ತೆರೆಬಿದ್ದಿದ್ದು, ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಈ ಬಾರಿ ಶ್ರೀ ಕೋಟೆ ಮಹಾಗಣಪತಿ ಹಾಗೂ ಕೋಟೆ ಶ್ರೀ ಮಾರಿಯಮ್ಮ ದೇವಾಲಯಗಳ ಮಂಟಪಗಳು ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಮಂಟಪಕ್ಕೆ ದ್ವಿತೀಯ ಹಾಗೂ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಮಂಟಪಕ್ಕೆ ತೃತೀಯ ಬಹುಮಾನ ದೊರಕಿದೆ.

ಗುರುವಾರ ರಾತ್ರಿ ೯ ಗಂಟೆಯಿಂದಲೇ ದಶಮಂಟಪಗಳ ಪ್ರದರ್ಶನಗಳು ಆರಂಭಗೊಂಡವು. ಪೇಟೆ ಶ್ರೀ ರಾಮ ಮಂದಿರ ದೇವಾಲಯ ಮಂಟಪ ಪ್ರಥಮ ಪ್ರದರ್ಶನ ನೀಡುತ್ತಿದ್ದಂತೆ ಉಳಿದ ಮಂಟಪಗಳು ಕೂಡ ದಶಮಂಟಪ ಸಮಿತಿ ನಿಗದಿಪಡಿಸಿದ್ದ ಸ್ಥಳಕ್ಕೆ ಆಗಮಿಸಿ ಪ್ರದರ್ಶನ ನೀಡಲು ಆರಂಭಿಸಿದವು. ಚಲನವಲಗಳನ್ನೊಳಗೊಂಡ ವಿಭಿನ್ನ ಕಲಾಕೃತಿಗಳ ಕಥಾಹಂದವನ್ನು ಮಂಟಪಗಳಲ್ಲಿ ಪ್ರಸ್ತುತಪಡಿಸಲಾಯಿತು. ನೂಕು ನುಗ್ಗಲಿನ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಜನರು ಪ್ರದರ್ಶನವನ್ನು ಕಣ್ತುಂಬಿಕೊಂಡರು.

ಇದನ್ನು ಓದಿ : ಮೈಸೂರು ದಸರಾ: ಆರನೇ ಬಾರಿ ಅಂಬಾರಿ ಹೊತ್ತು ಸಾಗುತ್ತಿರುವ ಅಭಿಮನ್ಯು

ವಿಘ್ನರಾಜನಿಂದ ಮಮತಾಸುರ ವಧೆ ಎಂಬ ಪೌರಾಣಿಕ ಕಥಾ ಸಾರಂಶವನ್ನು ಮಂಟಪದಲ್ಲಿ ಅಳವಡಿಸಿ ಪ್ರದರ್ಶನ ನೀಡಿದ ಶ್ರೀ ಕೋಟೆ ಮಹಾಗಣಪತಿ ದೇವಾಲಯ ಹಾಗೂ ಉಗ್ರನರಸಿಂಹನ ಉಗ್ರತ್ವ ಶಮನ ಎಂಬ ಕಥಾ ಹಂದರವನ್ನು ಮಂಟಪದಲ್ಲಿ ಅಳವಡಿಸಿ ಪ್ರದರ್ಶನ ನೀಡಿದ ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳು ಜಂಟಿಯಾಗಿ ಪ್ರಥಮ ಬಹುಮಾನ ಪಡೆದವು. ಪರಶುರಾಮನ ಕಥೆ ಪ್ರದರ್ಶಿಸಿದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ದ್ವಿತೀಯ ಬಹುಮಾನ ಪಡೆದರೆ, ಅಂಧಕಾಸುರನ ಸಂಹಾರ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಿದ್ದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ತೃತೀಯ ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು.

ರಾತ್ರಿಯಾಗುತ್ತಿದ್ದಂತೆ ಹೊರಜಿಲ್ಲೆ, ಹೊರ ರಾಜ್ಯದಿಂದ ಜನರು ನಗರದಲ್ಲಿ ಜಮಾವಣೆಗೊಂಡರು. ನಗರಕ್ಕೆ ವಾಹನ ಪ್ರವೇಶ ನಿರ್ಬಂಧಿಸಿದ್ದರಿಂದ ನಿಗದಿಪಡಿಸಿದ ಸ್ಥಳಗಳಲ್ಲಿ ವಾಹನ ನಿಲ್ಲಿಸಿ ನಗರದತ್ತ ಹೆಜ್ಜೆ ಹಾಕಿದರು. ಇಡೀ ರಾತ್ರಿ ನಗರದಲ್ಲಿ ನಡೆದ ದಶಮಂಟಪಗಳ ಶೋಭಾಯತ್ರೆ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಯಿತು. ದೇವಾನುದೇವತೆಗಳಿಂದ ಅಸುರರ ಸಂಹಾರದ ಕಥಾ ಹಂದರಗಳು ನೋಡುಗರಿಗೆ ದೇವಲೋಕವೇ ಧರೆಗಿಳಿದಂತೆ ಭಾಸವಾಯಿತು.

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

6 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

6 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

7 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

8 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

8 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

8 hours ago