ಕೊಡಗು

ಮದುವೆ ಸಮಾರಂಭದಲ್ಲಿ ಎಣ್ಣೆ ಪಾರ್ಟಿಗೆ ಗ್ರೀನ್ ಸಿಗ್ನಲ್

ಕೊಡಗು : ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇದ್ದರೂ ಸಹ ಕೊಡಗಿನ ಖಾಸಗಿ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡುವಂತೆ ಅಬಕಾರಿ ಇಲಾಖೆಗೆ ರಾಜ್ಯ ಜಂಟಿ ಚುನಾವಣಾಧಿಕಾರಿ ಸೂಚನೆ ನೀಡಿದ್ದಾರೆ. ಇದರಿಂದ ಕೊಡವರಿಗೆ ಸಂತೋಷನ್ನುಂಟು ಮಾಡಿದೆ.

ಕೊಡವರ ಮದುವೆಗಳಲ್ಲಿ ಮುಕ್ತವಾದ ಬಾರನ್ನೇ ತೆರೆದಿರಲಾಗುತ್ತದೆ. ಮದುವೆ ಸಮಾರಂಭದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮದ್ಯ ಸೇವಿಸಿ ಡಾನ್ಸ್​ ಮಾಡಿ ಎಂಜಾಯ್ ಮಾಡುತ್ತಾರೆ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇದಕ್ಕೆಲ್ಲ ಬ್ರೇಕ್ ಹಾಕಿತ್ತು. ಮದುವೆ, ಸಮಾರಂಭಗಳಲ್ಲಿ ಮದ್ಯದ ವ್ಯವಸ್ಥೆ ಮಾಡಬಾರದು ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಮದುವೆ ಇಟ್ಟುಕೊಂಡವರು ಕಂಗಾಲಾಗಿದ್ದರು.

ಈ ಹಿನ್ನೆಲೆಯಲ್ಲಿ ತಮ್ಮ ಸಂಪ್ರದಾಯಕ್ಕೆ ಅಡ್ಡಿ ಮಾಡಬಾರದು ಎಂದು ಕೊಡವ ಸಮಾಜ , ಗೌಡ ಸಮಾಜ ಮನವಿ ಮಾಡಿದ್ದವು. ಮದುವೆಗಳಲ್ಲಿ ಮದ್ಯ ಪೂರೈಕೆ ನಿರ್ಬಂಧ ಆದೇಶ ಹಿಂಪಡೆಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದರಿಂದ ಇದೀಗ ನಿರ್ಬಂಧ ಸಡಿಲಿಸಿ ಆದೇಶ ಹೊರಡಿಸಲಾಗಿದೆ.

ಕೊಡಗು ಅಂದ್ರೆ ಅಲ್ಲಿ ಒಂದಲ್ಲೊಂದು ವಿಶೇಷ. ವೈಶಿಷ್ಟ್ಯ ಕಾಣಸಿಗುತ್ತದೆ. ಇಲ್ಲಿಯ ಆಚಾರ-ವಿಚಾರಗಳು ಕೂಡ ವಿಭಿನ್ನ. ಸದ್ಯ ವಿವಾಹವಾಗಲು ಚೈತ್ರ ಕಾಲವಾಗಿರುವುದರಿಂದ ಜಿಲ್ಲೆಯಲ್ಲಿ ಮದುವೆಯ ಭರಾಟೆ ಜೋರಾಗಿದೆ. ಇದೀಗ ಮದುವೆಗಳಲ್ಲಿ ಮದ್ಯ ಪಾರ್ಟಿಗೂ ಅವಕಾಶ ಸಿಕ್ಕಿದ್ದು, ಕೊಡವರ ಖುಷಿ ಮತ್ತಷ್ಟು ಹೆಚ್ಚಿಸಿದೆ.

ಕೊಡಗಿನಲ್ಲಿ ಮದುವೆ ಸೇರಿದಂತೆ ಯಾವುದೇ ಸಮಾರಂಭಗಳಲ್ಲಿ ಮುಕ್ತ ಬಾರ್‌ ಗಳನ್ನು ತೆರೆಯುವುದಕ್ಕೆ ಅವಕಾಶ ಇಲ್ಲ. ಮುಕ್ತ ಬಾರ್ ತೆರೆಯಲು ಅವಕಾಶ ನೀಡಿದರೆ ಅದನ್ನು ದುರುಪಯೋಗ ಪಡಿಸಿಕೊಂಡು ಮತದಾರರಿಗೆ ಮದ್ಯ ಹಂಚಿಕೆ ಮಾಡುವ ಸಾಧ್ಯತೆ ಇರಬಹುದು ಎಂದು ಚುನಾವಣಾ ಆಯೋಗ ಅದಕ್ಕೆ ಕಡಿವಾಣ ಹಾಕಿತ್ತು.

lokesh

Recent Posts

ಇನ್ಸ್‌ಸ್ಟಾಗ್ರಾಂನಲ್ಲಿ ಬ್ಯಾಡ್‌ ಕಾಮೆಂಟ್‌ : ಸಾನ್ವಿ ಸುದೀಪ್‌ ಖಡಕ್‌ ತಿರುಗೇಟು

ಬೆಂಗಳೂರು : ನಟ ಕಿಚ್ಚ ಸುದೀಪ್‌ ಮಗಳು, ಗಾಯಕಿ ಸಾನ್ವಿ ಸುದೀಪ್‌ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…

19 mins ago

ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್‌ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್‌ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…

32 mins ago

ಹುಣಸೂರು | ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿ

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…

1 hour ago

ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…

2 hours ago

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…

2 hours ago

800 ಕಿ.ಮೀ ಪಾದಯಾತ್ರೆ ಮೂಲಕ ಅಯ್ಯಪ್ಪನ ದರ್ಶನ ಪಡೆಯುವುದಕ್ಕೆ ಹೊರಟ ಭಕ್ತರು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…

2 hours ago