ಕೊಡಗು

ಮದುವೆ ಸಮಾರಂಭದಲ್ಲಿ ಎಣ್ಣೆ ಪಾರ್ಟಿಗೆ ಗ್ರೀನ್ ಸಿಗ್ನಲ್

ಕೊಡಗು : ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇದ್ದರೂ ಸಹ ಕೊಡಗಿನ ಖಾಸಗಿ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡುವಂತೆ ಅಬಕಾರಿ ಇಲಾಖೆಗೆ ರಾಜ್ಯ ಜಂಟಿ ಚುನಾವಣಾಧಿಕಾರಿ ಸೂಚನೆ ನೀಡಿದ್ದಾರೆ. ಇದರಿಂದ ಕೊಡವರಿಗೆ ಸಂತೋಷನ್ನುಂಟು ಮಾಡಿದೆ.

ಕೊಡವರ ಮದುವೆಗಳಲ್ಲಿ ಮುಕ್ತವಾದ ಬಾರನ್ನೇ ತೆರೆದಿರಲಾಗುತ್ತದೆ. ಮದುವೆ ಸಮಾರಂಭದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮದ್ಯ ಸೇವಿಸಿ ಡಾನ್ಸ್​ ಮಾಡಿ ಎಂಜಾಯ್ ಮಾಡುತ್ತಾರೆ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇದಕ್ಕೆಲ್ಲ ಬ್ರೇಕ್ ಹಾಕಿತ್ತು. ಮದುವೆ, ಸಮಾರಂಭಗಳಲ್ಲಿ ಮದ್ಯದ ವ್ಯವಸ್ಥೆ ಮಾಡಬಾರದು ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಮದುವೆ ಇಟ್ಟುಕೊಂಡವರು ಕಂಗಾಲಾಗಿದ್ದರು.

ಈ ಹಿನ್ನೆಲೆಯಲ್ಲಿ ತಮ್ಮ ಸಂಪ್ರದಾಯಕ್ಕೆ ಅಡ್ಡಿ ಮಾಡಬಾರದು ಎಂದು ಕೊಡವ ಸಮಾಜ , ಗೌಡ ಸಮಾಜ ಮನವಿ ಮಾಡಿದ್ದವು. ಮದುವೆಗಳಲ್ಲಿ ಮದ್ಯ ಪೂರೈಕೆ ನಿರ್ಬಂಧ ಆದೇಶ ಹಿಂಪಡೆಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದರಿಂದ ಇದೀಗ ನಿರ್ಬಂಧ ಸಡಿಲಿಸಿ ಆದೇಶ ಹೊರಡಿಸಲಾಗಿದೆ.

ಕೊಡಗು ಅಂದ್ರೆ ಅಲ್ಲಿ ಒಂದಲ್ಲೊಂದು ವಿಶೇಷ. ವೈಶಿಷ್ಟ್ಯ ಕಾಣಸಿಗುತ್ತದೆ. ಇಲ್ಲಿಯ ಆಚಾರ-ವಿಚಾರಗಳು ಕೂಡ ವಿಭಿನ್ನ. ಸದ್ಯ ವಿವಾಹವಾಗಲು ಚೈತ್ರ ಕಾಲವಾಗಿರುವುದರಿಂದ ಜಿಲ್ಲೆಯಲ್ಲಿ ಮದುವೆಯ ಭರಾಟೆ ಜೋರಾಗಿದೆ. ಇದೀಗ ಮದುವೆಗಳಲ್ಲಿ ಮದ್ಯ ಪಾರ್ಟಿಗೂ ಅವಕಾಶ ಸಿಕ್ಕಿದ್ದು, ಕೊಡವರ ಖುಷಿ ಮತ್ತಷ್ಟು ಹೆಚ್ಚಿಸಿದೆ.

ಕೊಡಗಿನಲ್ಲಿ ಮದುವೆ ಸೇರಿದಂತೆ ಯಾವುದೇ ಸಮಾರಂಭಗಳಲ್ಲಿ ಮುಕ್ತ ಬಾರ್‌ ಗಳನ್ನು ತೆರೆಯುವುದಕ್ಕೆ ಅವಕಾಶ ಇಲ್ಲ. ಮುಕ್ತ ಬಾರ್ ತೆರೆಯಲು ಅವಕಾಶ ನೀಡಿದರೆ ಅದನ್ನು ದುರುಪಯೋಗ ಪಡಿಸಿಕೊಂಡು ಮತದಾರರಿಗೆ ಮದ್ಯ ಹಂಚಿಕೆ ಮಾಡುವ ಸಾಧ್ಯತೆ ಇರಬಹುದು ಎಂದು ಚುನಾವಣಾ ಆಯೋಗ ಅದಕ್ಕೆ ಕಡಿವಾಣ ಹಾಕಿತ್ತು.

lokesh

Recent Posts

ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಎಕರೆಗಟ್ಟಲೇ ಬಾಳೆ ಬೆಳೆ ನಾಶ

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…

6 mins ago

ಗಂಡು ಮಗುವಿಗೆ ಜನ್ಮ ನೀಡಿದ ಡಾಲಿ ಧನಂಜಯ್ ಪತ್ನಿ ಧನ್ಯತಾ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್‌…

51 mins ago

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

4 hours ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

4 hours ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

5 hours ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

5 hours ago